Crime

ದೆಹಲಿ ಬೆಚ್ಚಿ ಬೀಳಿಸಿದ ವಿಕೃತಿ: ತಾಯಿಯ ಮೇಲೆ ಎರಡು ಬಾರಿ ಅತ್ಯಾಚಾರ

ನವದೆಹಲಿ, ಆಗಸ್ಟ್ 17: ದೆಹಲಿಯ ಹೌಝ್‌ಕ್ವಾಝಿ ಪ್ರದೇಶದಲ್ಲಿ ನಡೆದಿರುವ ಅಮಾನುಷ ಘಟನೆ ನಾಗರೀಕ ಸಮಾಜವನ್ನೇ ಬೆಚ್ಚಿ ಬೀಳಿಸಿದೆ. 39 ವರ್ಷದ ಯುವಕನು ಸ್ವಂತ ತಾಯಿಯ ಮೇಲೆಯೇ ಎರಡು ಬಾರಿ ದೌರ್ಜನ್ಯ ಎಸಗಿರುವ ಆರೋಪ ಹೊರಬಿದ್ದಿದೆ.

ಪೊಲೀಸರ ಮಾಹಿತಿಯಂತೆ, 65 ವರ್ಷದ ಮಹಿಳೆ ತನ್ನ ಪತಿ ಮತ್ತು ಕಿರಿಯ ಮಗಳೊಂದಿಗೆ ಜುಲೈ 17ರಂದು ಧಾರ್ಮಿಕ ಪ್ರವಾಸಕ್ಕಾಗಿ ಸೌದಿ ಅರೇಬಿಯಾ ತೆರಳಿದ್ದರು. ಈ ವೇಳೆಯಲ್ಲಿ ಮನೆಯಲ್ಲಿ ಇದ್ದ ಮಗ ಸತತವಾಗಿ ತಂದೆಗೆ ಕರೆ ಮಾಡಿ ತಕ್ಷಣ ಮನೆಗೆ ಮರಳುವಂತೆ ಒತ್ತಾಯಿಸಿದ್ದ. ತಾಯಿಗೆ ಅಕ್ರಮ ಸಂಬಂಧವಿದೆ ಎಂಬ ಗಂಭೀರ ಆರೋಪವನ್ನೂ ತಂದೆಯ ಮುಂದೆ ಮಾಡಿದ್ದ. ಇದರಿಂದ ತಕ್ಷಣವೇ ಕುಟುಂಬ ಭಾರತಕ್ಕೆ ಮರಳಿತ್ತು.

ಮನೆಗೆ ಬಂದು ಕೂಡಲೇ ಗಲಾಟೆ ಶುರುವಾಯಿತು. ತಂದೆ ಮಾತಿನ ಮೂಲಕ ಮಗನನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ ಅವನು ಯಾರ ಮಾತನ್ನೂ ಕೇಳಲಿಲ್ಲ. ತಾಯಿಗೆ ಡಿವೋರ್ಸ್ ಕೊಡಿಸುವಂತೆ ತಂದೆಯನ್ನು ಒತ್ತಾಯಿಸುತ್ತಾ ಕುಟುಂಬದ ಮೇಲೆ ಒತ್ತಡ ಹೇರುತ್ತಿದ್ದ.

ಆಗಸ್ಟ್ 11ರಂದು, ತಾಯಿಯೊಂದಿಗೆ ಮಾತನಾಡಬೇಕಿದೆ, ಕೆಲವು ಪ್ರಶ್ನೆಗಳಿವೆ ಎಂದು ಹೇಳಿ, ಕೋಣೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿದ್ದಾನೆ. ಬಳಿಕ ಬಲವಂತವಾಗಿ ಬುರ್ಖಾ ತೆಗೆಯಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. “ನಾನು ನಿನ್ನ ತಾಯಿ” ಎಂದು ಅಳುತ್ತ ಬೇಡಿಕೊಂಡರೂ ಮಗ ವಿಕೃತಿ ಮೆರೆದಿದ್ದಾನೆಂದು ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

ಘಟನೆಯ ನಂತರ ಹಿರಿಯ ಮಗಳ ಮನೆಗೆ ತೆರಳಿದ್ದ ಮಹಿಳೆ ಆಗಸ್ಟ್ 14ರಂದು ಮನೆಗೆ ಹಿಂತಿರುಗಿದಾಗ ಮತ್ತೊಮ್ಮೆ ಮಗ ಅವಳ ಮೇಲೆಯೇ ದೌರ್ಜನ್ಯ ಎಸಗಿದ್ದಾನೆ. ಇದರಿಂದ ತತ್ತರಿಸಿದ ತಾಯಿ ಕೊನೆಗೂ ಕಿರಿಯ ಮಗಳೊಂದಿಗೆ ಪೊಲೀಸರ ಶರಣಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಹೌಝ್‌ಕ್ವಾಝಿ ಪೊಲೀಸರು ಆರೋಪಿ ಮಗನನ್ನು ವಶಕ್ಕೆ ಪಡೆಯಲು ತೀವ್ರ ಶೋಧ ನಡೆಸುತ್ತಿದ್ದಾರೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago