Crime

ದೆಹಲಿ ಬೆಚ್ಚಿ ಬೀಳಿಸಿದ ವಿಕೃತಿ: ತಾಯಿಯ ಮೇಲೆ ಎರಡು ಬಾರಿ ಅತ್ಯಾಚಾರ

ನವದೆಹಲಿ, ಆಗಸ್ಟ್ 17: ದೆಹಲಿಯ ಹೌಝ್‌ಕ್ವಾಝಿ ಪ್ರದೇಶದಲ್ಲಿ ನಡೆದಿರುವ ಅಮಾನುಷ ಘಟನೆ ನಾಗರೀಕ ಸಮಾಜವನ್ನೇ ಬೆಚ್ಚಿ ಬೀಳಿಸಿದೆ. 39 ವರ್ಷದ ಯುವಕನು ಸ್ವಂತ ತಾಯಿಯ ಮೇಲೆಯೇ ಎರಡು ಬಾರಿ ದೌರ್ಜನ್ಯ ಎಸಗಿರುವ ಆರೋಪ ಹೊರಬಿದ್ದಿದೆ.

ಪೊಲೀಸರ ಮಾಹಿತಿಯಂತೆ, 65 ವರ್ಷದ ಮಹಿಳೆ ತನ್ನ ಪತಿ ಮತ್ತು ಕಿರಿಯ ಮಗಳೊಂದಿಗೆ ಜುಲೈ 17ರಂದು ಧಾರ್ಮಿಕ ಪ್ರವಾಸಕ್ಕಾಗಿ ಸೌದಿ ಅರೇಬಿಯಾ ತೆರಳಿದ್ದರು. ಈ ವೇಳೆಯಲ್ಲಿ ಮನೆಯಲ್ಲಿ ಇದ್ದ ಮಗ ಸತತವಾಗಿ ತಂದೆಗೆ ಕರೆ ಮಾಡಿ ತಕ್ಷಣ ಮನೆಗೆ ಮರಳುವಂತೆ ಒತ್ತಾಯಿಸಿದ್ದ. ತಾಯಿಗೆ ಅಕ್ರಮ ಸಂಬಂಧವಿದೆ ಎಂಬ ಗಂಭೀರ ಆರೋಪವನ್ನೂ ತಂದೆಯ ಮುಂದೆ ಮಾಡಿದ್ದ. ಇದರಿಂದ ತಕ್ಷಣವೇ ಕುಟುಂಬ ಭಾರತಕ್ಕೆ ಮರಳಿತ್ತು.

ಮನೆಗೆ ಬಂದು ಕೂಡಲೇ ಗಲಾಟೆ ಶುರುವಾಯಿತು. ತಂದೆ ಮಾತಿನ ಮೂಲಕ ಮಗನನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ ಅವನು ಯಾರ ಮಾತನ್ನೂ ಕೇಳಲಿಲ್ಲ. ತಾಯಿಗೆ ಡಿವೋರ್ಸ್ ಕೊಡಿಸುವಂತೆ ತಂದೆಯನ್ನು ಒತ್ತಾಯಿಸುತ್ತಾ ಕುಟುಂಬದ ಮೇಲೆ ಒತ್ತಡ ಹೇರುತ್ತಿದ್ದ.

ಆಗಸ್ಟ್ 11ರಂದು, ತಾಯಿಯೊಂದಿಗೆ ಮಾತನಾಡಬೇಕಿದೆ, ಕೆಲವು ಪ್ರಶ್ನೆಗಳಿವೆ ಎಂದು ಹೇಳಿ, ಕೋಣೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿದ್ದಾನೆ. ಬಳಿಕ ಬಲವಂತವಾಗಿ ಬುರ್ಖಾ ತೆಗೆಯಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. “ನಾನು ನಿನ್ನ ತಾಯಿ” ಎಂದು ಅಳುತ್ತ ಬೇಡಿಕೊಂಡರೂ ಮಗ ವಿಕೃತಿ ಮೆರೆದಿದ್ದಾನೆಂದು ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

ಘಟನೆಯ ನಂತರ ಹಿರಿಯ ಮಗಳ ಮನೆಗೆ ತೆರಳಿದ್ದ ಮಹಿಳೆ ಆಗಸ್ಟ್ 14ರಂದು ಮನೆಗೆ ಹಿಂತಿರುಗಿದಾಗ ಮತ್ತೊಮ್ಮೆ ಮಗ ಅವಳ ಮೇಲೆಯೇ ದೌರ್ಜನ್ಯ ಎಸಗಿದ್ದಾನೆ. ಇದರಿಂದ ತತ್ತರಿಸಿದ ತಾಯಿ ಕೊನೆಗೂ ಕಿರಿಯ ಮಗಳೊಂದಿಗೆ ಪೊಲೀಸರ ಶರಣಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಹೌಝ್‌ಕ್ವಾಝಿ ಪೊಲೀಸರು ಆರೋಪಿ ಮಗನನ್ನು ವಶಕ್ಕೆ ಪಡೆಯಲು ತೀವ್ರ ಶೋಧ ನಡೆಸುತ್ತಿದ್ದಾರೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

7 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

8 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

20 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

20 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

20 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

20 hours ago