ನವದೆಹಲಿ, ಆಗಸ್ಟ್ 17: ದೆಹಲಿಯ ಹೌಝ್ಕ್ವಾಝಿ ಪ್ರದೇಶದಲ್ಲಿ ನಡೆದಿರುವ ಅಮಾನುಷ ಘಟನೆ ನಾಗರೀಕ ಸಮಾಜವನ್ನೇ ಬೆಚ್ಚಿ ಬೀಳಿಸಿದೆ. 39 ವರ್ಷದ ಯುವಕನು ಸ್ವಂತ ತಾಯಿಯ ಮೇಲೆಯೇ ಎರಡು ಬಾರಿ ದೌರ್ಜನ್ಯ ಎಸಗಿರುವ ಆರೋಪ ಹೊರಬಿದ್ದಿದೆ.
ಪೊಲೀಸರ ಮಾಹಿತಿಯಂತೆ, 65 ವರ್ಷದ ಮಹಿಳೆ ತನ್ನ ಪತಿ ಮತ್ತು ಕಿರಿಯ ಮಗಳೊಂದಿಗೆ ಜುಲೈ 17ರಂದು ಧಾರ್ಮಿಕ ಪ್ರವಾಸಕ್ಕಾಗಿ ಸೌದಿ ಅರೇಬಿಯಾ ತೆರಳಿದ್ದರು. ಈ ವೇಳೆಯಲ್ಲಿ ಮನೆಯಲ್ಲಿ ಇದ್ದ ಮಗ ಸತತವಾಗಿ ತಂದೆಗೆ ಕರೆ ಮಾಡಿ ತಕ್ಷಣ ಮನೆಗೆ ಮರಳುವಂತೆ ಒತ್ತಾಯಿಸಿದ್ದ. ತಾಯಿಗೆ ಅಕ್ರಮ ಸಂಬಂಧವಿದೆ ಎಂಬ ಗಂಭೀರ ಆರೋಪವನ್ನೂ ತಂದೆಯ ಮುಂದೆ ಮಾಡಿದ್ದ. ಇದರಿಂದ ತಕ್ಷಣವೇ ಕುಟುಂಬ ಭಾರತಕ್ಕೆ ಮರಳಿತ್ತು.
ಮನೆಗೆ ಬಂದು ಕೂಡಲೇ ಗಲಾಟೆ ಶುರುವಾಯಿತು. ತಂದೆ ಮಾತಿನ ಮೂಲಕ ಮಗನನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ ಅವನು ಯಾರ ಮಾತನ್ನೂ ಕೇಳಲಿಲ್ಲ. ತಾಯಿಗೆ ಡಿವೋರ್ಸ್ ಕೊಡಿಸುವಂತೆ ತಂದೆಯನ್ನು ಒತ್ತಾಯಿಸುತ್ತಾ ಕುಟುಂಬದ ಮೇಲೆ ಒತ್ತಡ ಹೇರುತ್ತಿದ್ದ.
ಆಗಸ್ಟ್ 11ರಂದು, ತಾಯಿಯೊಂದಿಗೆ ಮಾತನಾಡಬೇಕಿದೆ, ಕೆಲವು ಪ್ರಶ್ನೆಗಳಿವೆ ಎಂದು ಹೇಳಿ, ಕೋಣೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿದ್ದಾನೆ. ಬಳಿಕ ಬಲವಂತವಾಗಿ ಬುರ್ಖಾ ತೆಗೆಯಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. “ನಾನು ನಿನ್ನ ತಾಯಿ” ಎಂದು ಅಳುತ್ತ ಬೇಡಿಕೊಂಡರೂ ಮಗ ವಿಕೃತಿ ಮೆರೆದಿದ್ದಾನೆಂದು ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.
ಘಟನೆಯ ನಂತರ ಹಿರಿಯ ಮಗಳ ಮನೆಗೆ ತೆರಳಿದ್ದ ಮಹಿಳೆ ಆಗಸ್ಟ್ 14ರಂದು ಮನೆಗೆ ಹಿಂತಿರುಗಿದಾಗ ಮತ್ತೊಮ್ಮೆ ಮಗ ಅವಳ ಮೇಲೆಯೇ ದೌರ್ಜನ್ಯ ಎಸಗಿದ್ದಾನೆ. ಇದರಿಂದ ತತ್ತರಿಸಿದ ತಾಯಿ ಕೊನೆಗೂ ಕಿರಿಯ ಮಗಳೊಂದಿಗೆ ಪೊಲೀಸರ ಶರಣಾಗಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಹೌಝ್ಕ್ವಾಝಿ ಪೊಲೀಸರು ಆರೋಪಿ ಮಗನನ್ನು ವಶಕ್ಕೆ ಪಡೆಯಲು ತೀವ್ರ ಶೋಧ ನಡೆಸುತ್ತಿದ್ದಾರೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…