ಯುವತಿಯ ವಿಚಾರಕ್ಕಾಗಿ ಜಗಳವಾಗಿದ್ದು ಸ್ನೇಹಿತನೇ ತನ್ನ ಸ್ನೇಹಿತನನ್ನು ಕೊಂದು ಎದೆ ಸೀಳಿ ಪ್ರೇಯಸಿಗೆ ಫೋಟೋ ಕಳುಹಿಸಿರುವಂತಹ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದೆ.
ಹರಿಹರ ಕೃಷ್ಣ ಮತ್ತು ನವೀನ್ ಇವರು ಸ್ನೇಹಿತರಾಗಿರುತ್ತಾರೆ. ಕಾಲೇಜಿನಲ್ಲಿ ಓದುತ್ತಿರುವಂತಹ ಸಂದರ್ಭದಲ್ಲಿ ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಾರೆ ಆದರೆ ನವೀನ್ ಮೊದಲು ಹೋಗಿ ಯುವತಿಯ ಬಳಿ ಪ್ರಪೋಸ್ ಮಾಡುತ್ತಾನೆ ಅದಕ್ಕೆ ಯುವತಿ ಸಹ ಒಪ್ಪಿರುತ್ತಾಳೆ. ಇದಾದ ಬಳಿಕ ಎರಡು ವರ್ಷಗಳ ಕಾಲ ಇಬ್ಬರು ಜೊತೆಯಲ್ಲೇ ಇರುತ್ತಾರೆ ನಂತರ ಅವರು ಬೇರ್ಪಡುತ್ತಾರೆ. ಈ ಸಂದರ್ಭದಲ್ಲಿ ಹರಿಹರ ಕೃಷ್ಣ ಯುವತಿಯ ಬಳಿ ಪ್ರಪೋಸ್ ಮಾಡುತ್ತಾನೆ ಅದಕ್ಕೆ ಆಕೆಯೂ ಸಹ ಒಪ್ಪುತ್ತಾಳೆ. ಇವರಿಬ್ಬರ ಲವ್ ಸ್ಟೋರಿ ಶುರುವಾಗುವಷ್ಟರಲ್ಲಿ ನವೀನ್ ಪುನಹ ಆಕೆಗೆ ಮೆಸೇಜ್ ಮಾಡುವುದು ಕರೆ ಮಾಡುವುದನ್ನು ಮಾಡುತ್ತಾನೆ.
ಈ ವಿಚಾರದಿಂದ ಬೇಜಾರಾಗಿದ್ದ ಹರಿಹರ ಕೃಷ್ಣ ಮೂರು ತಿಂಗಳಿಂದ ಸರಿಯಾದ ಸಮಯಕ್ಕೆ ಕಾದು ಕುಳಿತಿರುತ್ತಾನೆ, ಫೆಬ್ರವರಿ 17ರಂದು ನವೀನನನ್ನು ಭೇಟಿಯಾಗಿ ಪಾರ್ಟಿಯ ನೆಪದಲ್ಲಿ ಚೆನ್ನಾಗಿ ಕಂಠಪೂರ್ತಿ ಕುಡಿದಿರುತ್ತಾರೆ. ಈ ಸಂದರ್ಭದಲ್ಲಿ ಇವರಿಬ್ಬರ ಮಧ್ಯೆ ಜಗಳ ಶುರುವಾಗಿದೆ. ಈ ವೇಳೆ ರೊಚ್ಚಿಗೆದ್ದ ಹರಿಹರ ಕೃಷ್ಣ ತನ್ನ ಸ್ನೇಹಿತ ನವೀನನನ್ನೇ ಕೊಲೆ ಗೈದಿದ್ದಾನೆ. ನಂತರ ಅವನನ್ನು ಬೆತ್ತಲೆ ಮಾಡಿ ಆತನ ಬೆರಳು ತಲೆ ಖಾಸಗಿ ಅಂಗಗಳು ಹಾಗೂ ಹೃದಯವನ್ನು ಕತ್ತರಿಸಿದ್ದಾನೆ.
ಇದಾದ ಬಳಿಕ ಆತನ ಹೃದಯದ ಫೋಟೋವನ್ನು ತನ್ನ ಪ್ರೇಯಸಿಗೆ ಕಳುಹಿಸಿದ್ದಾನೆ ಇದಕ್ಕೆ ಆಕೆ ವೆರಿ ಗುಡ್ ಎಂದು ಪ್ರತಿಕ್ರಿಯಿಸಿರುತ್ತಾಳೆ ಎಂದು ಹೇಳಲಾಗುತ್ತಿದೆ.
ನಂತರ ಆತನೇ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದು ಪೊಲೀಸರು ಹರಿಹರ ಕೃಷ್ಣನ ವಿರುದ್ಧ ಪ್ರಕರಣ ದಾಖಲಿಸಿದ್ದು ಆತನನ್ನು ಕೋರ್ಟಿಗೆ ಹಾಜರುಪಡಿಸಿರುತ್ತಾರೆ.
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…