Latest

ಸ್ನೇಹಿತನ ಎದೆ ಸೀಳಿ ಪ್ರೇಯಸಿಗೆ ಫೋಟೋ ಕಳಿಸಿದ; ವೆರಿ ಗುಡ್ ಎಂದ ಪ್ರೇಯಸಿ.

ಯುವತಿಯ ವಿಚಾರಕ್ಕಾಗಿ ಜಗಳವಾಗಿದ್ದು ಸ್ನೇಹಿತನೇ ತನ್ನ ಸ್ನೇಹಿತನನ್ನು ಕೊಂದು ಎದೆ ಸೀಳಿ ಪ್ರೇಯಸಿಗೆ ಫೋಟೋ ಕಳುಹಿಸಿರುವಂತಹ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದೆ.
ಹರಿಹರ ಕೃಷ್ಣ ಮತ್ತು ನವೀನ್ ಇವರು ಸ್ನೇಹಿತರಾಗಿರುತ್ತಾರೆ. ಕಾಲೇಜಿನಲ್ಲಿ ಓದುತ್ತಿರುವಂತಹ ಸಂದರ್ಭದಲ್ಲಿ ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಾರೆ ಆದರೆ ನವೀನ್ ಮೊದಲು ಹೋಗಿ ಯುವತಿಯ ಬಳಿ ಪ್ರಪೋಸ್ ಮಾಡುತ್ತಾನೆ ಅದಕ್ಕೆ ಯುವತಿ ಸಹ ಒಪ್ಪಿರುತ್ತಾಳೆ. ಇದಾದ ಬಳಿಕ ಎರಡು ವರ್ಷಗಳ ಕಾಲ ಇಬ್ಬರು ಜೊತೆಯಲ್ಲೇ ಇರುತ್ತಾರೆ ನಂತರ ಅವರು ಬೇರ್ಪಡುತ್ತಾರೆ. ಈ ಸಂದರ್ಭದಲ್ಲಿ ಹರಿಹರ ಕೃಷ್ಣ ಯುವತಿಯ ಬಳಿ ಪ್ರಪೋಸ್ ಮಾಡುತ್ತಾನೆ ಅದಕ್ಕೆ ಆಕೆಯೂ ಸಹ ಒಪ್ಪುತ್ತಾಳೆ. ಇವರಿಬ್ಬರ ಲವ್ ಸ್ಟೋರಿ ಶುರುವಾಗುವಷ್ಟರಲ್ಲಿ ನವೀನ್ ಪುನಹ ಆಕೆಗೆ ಮೆಸೇಜ್ ಮಾಡುವುದು ಕರೆ ಮಾಡುವುದನ್ನು ಮಾಡುತ್ತಾನೆ.
ಈ ವಿಚಾರದಿಂದ ಬೇಜಾರಾಗಿದ್ದ ಹರಿಹರ ಕೃಷ್ಣ ಮೂರು ತಿಂಗಳಿಂದ ಸರಿಯಾದ ಸಮಯಕ್ಕೆ ಕಾದು ಕುಳಿತಿರುತ್ತಾನೆ, ಫೆಬ್ರವರಿ 17ರಂದು ನವೀನನನ್ನು ಭೇಟಿಯಾಗಿ ಪಾರ್ಟಿಯ ನೆಪದಲ್ಲಿ ಚೆನ್ನಾಗಿ ಕಂಠಪೂರ್ತಿ ಕುಡಿದಿರುತ್ತಾರೆ. ಈ ಸಂದರ್ಭದಲ್ಲಿ ಇವರಿಬ್ಬರ ಮಧ್ಯೆ ಜಗಳ ಶುರುವಾಗಿದೆ. ಈ ವೇಳೆ ರೊಚ್ಚಿಗೆದ್ದ ಹರಿಹರ ಕೃಷ್ಣ ತನ್ನ ಸ್ನೇಹಿತ ನವೀನನನ್ನೇ ಕೊಲೆ ಗೈದಿದ್ದಾನೆ. ನಂತರ ಅವನನ್ನು ಬೆತ್ತಲೆ ಮಾಡಿ ಆತನ ಬೆರಳು ತಲೆ ಖಾಸಗಿ ಅಂಗಗಳು ಹಾಗೂ ಹೃದಯವನ್ನು ಕತ್ತರಿಸಿದ್ದಾನೆ.
ಇದಾದ ಬಳಿಕ ಆತನ ಹೃದಯದ ಫೋಟೋವನ್ನು ತನ್ನ ಪ್ರೇಯಸಿಗೆ ಕಳುಹಿಸಿದ್ದಾನೆ ಇದಕ್ಕೆ ಆಕೆ ವೆರಿ ಗುಡ್ ಎಂದು ಪ್ರತಿಕ್ರಿಯಿಸಿರುತ್ತಾಳೆ ಎಂದು ಹೇಳಲಾಗುತ್ತಿದೆ.
ನಂತರ ಆತನೇ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದು ಪೊಲೀಸರು ಹರಿಹರ ಕೃಷ್ಣನ ವಿರುದ್ಧ ಪ್ರಕರಣ ದಾಖಲಿಸಿದ್ದು ಆತನನ್ನು ಕೋರ್ಟಿಗೆ ಹಾಜರುಪಡಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago