Latest

ಸ್ನೇಹಿತನ ಎದೆ ಸೀಳಿ ಪ್ರೇಯಸಿಗೆ ಫೋಟೋ ಕಳಿಸಿದ; ವೆರಿ ಗುಡ್ ಎಂದ ಪ್ರೇಯಸಿ.

ಯುವತಿಯ ವಿಚಾರಕ್ಕಾಗಿ ಜಗಳವಾಗಿದ್ದು ಸ್ನೇಹಿತನೇ ತನ್ನ ಸ್ನೇಹಿತನನ್ನು ಕೊಂದು ಎದೆ ಸೀಳಿ ಪ್ರೇಯಸಿಗೆ ಫೋಟೋ ಕಳುಹಿಸಿರುವಂತಹ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದೆ.
ಹರಿಹರ ಕೃಷ್ಣ ಮತ್ತು ನವೀನ್ ಇವರು ಸ್ನೇಹಿತರಾಗಿರುತ್ತಾರೆ. ಕಾಲೇಜಿನಲ್ಲಿ ಓದುತ್ತಿರುವಂತಹ ಸಂದರ್ಭದಲ್ಲಿ ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಾರೆ ಆದರೆ ನವೀನ್ ಮೊದಲು ಹೋಗಿ ಯುವತಿಯ ಬಳಿ ಪ್ರಪೋಸ್ ಮಾಡುತ್ತಾನೆ ಅದಕ್ಕೆ ಯುವತಿ ಸಹ ಒಪ್ಪಿರುತ್ತಾಳೆ. ಇದಾದ ಬಳಿಕ ಎರಡು ವರ್ಷಗಳ ಕಾಲ ಇಬ್ಬರು ಜೊತೆಯಲ್ಲೇ ಇರುತ್ತಾರೆ ನಂತರ ಅವರು ಬೇರ್ಪಡುತ್ತಾರೆ. ಈ ಸಂದರ್ಭದಲ್ಲಿ ಹರಿಹರ ಕೃಷ್ಣ ಯುವತಿಯ ಬಳಿ ಪ್ರಪೋಸ್ ಮಾಡುತ್ತಾನೆ ಅದಕ್ಕೆ ಆಕೆಯೂ ಸಹ ಒಪ್ಪುತ್ತಾಳೆ. ಇವರಿಬ್ಬರ ಲವ್ ಸ್ಟೋರಿ ಶುರುವಾಗುವಷ್ಟರಲ್ಲಿ ನವೀನ್ ಪುನಹ ಆಕೆಗೆ ಮೆಸೇಜ್ ಮಾಡುವುದು ಕರೆ ಮಾಡುವುದನ್ನು ಮಾಡುತ್ತಾನೆ.
ಈ ವಿಚಾರದಿಂದ ಬೇಜಾರಾಗಿದ್ದ ಹರಿಹರ ಕೃಷ್ಣ ಮೂರು ತಿಂಗಳಿಂದ ಸರಿಯಾದ ಸಮಯಕ್ಕೆ ಕಾದು ಕುಳಿತಿರುತ್ತಾನೆ, ಫೆಬ್ರವರಿ 17ರಂದು ನವೀನನನ್ನು ಭೇಟಿಯಾಗಿ ಪಾರ್ಟಿಯ ನೆಪದಲ್ಲಿ ಚೆನ್ನಾಗಿ ಕಂಠಪೂರ್ತಿ ಕುಡಿದಿರುತ್ತಾರೆ. ಈ ಸಂದರ್ಭದಲ್ಲಿ ಇವರಿಬ್ಬರ ಮಧ್ಯೆ ಜಗಳ ಶುರುವಾಗಿದೆ. ಈ ವೇಳೆ ರೊಚ್ಚಿಗೆದ್ದ ಹರಿಹರ ಕೃಷ್ಣ ತನ್ನ ಸ್ನೇಹಿತ ನವೀನನನ್ನೇ ಕೊಲೆ ಗೈದಿದ್ದಾನೆ. ನಂತರ ಅವನನ್ನು ಬೆತ್ತಲೆ ಮಾಡಿ ಆತನ ಬೆರಳು ತಲೆ ಖಾಸಗಿ ಅಂಗಗಳು ಹಾಗೂ ಹೃದಯವನ್ನು ಕತ್ತರಿಸಿದ್ದಾನೆ.
ಇದಾದ ಬಳಿಕ ಆತನ ಹೃದಯದ ಫೋಟೋವನ್ನು ತನ್ನ ಪ್ರೇಯಸಿಗೆ ಕಳುಹಿಸಿದ್ದಾನೆ ಇದಕ್ಕೆ ಆಕೆ ವೆರಿ ಗುಡ್ ಎಂದು ಪ್ರತಿಕ್ರಿಯಿಸಿರುತ್ತಾಳೆ ಎಂದು ಹೇಳಲಾಗುತ್ತಿದೆ.
ನಂತರ ಆತನೇ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದು ಪೊಲೀಸರು ಹರಿಹರ ಕೃಷ್ಣನ ವಿರುದ್ಧ ಪ್ರಕರಣ ದಾಖಲಿಸಿದ್ದು ಆತನನ್ನು ಕೋರ್ಟಿಗೆ ಹಾಜರುಪಡಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

2 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

2 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

15 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

15 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

15 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

15 hours ago