Crime

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟು ಮಾರಣಾಂತಿಕ ಹಲ್ಲೆ ಮಾಡಿದ್ದಲ್ಲದೆ ಮನಸೋ ಇಚ್ಚೆ ಮೈಮೇಲೆ ಬರೆ ಎಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ತಿಕೋಟದಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವ್ಯಕ್ತಿ ಒಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಎರಡು ತಿಂಗಳಿನಿಂದ ಶೆಡ್ ನಲ್ಲಿ ಕೂಡಿಟ್ಟಿದ್ದಾನೆ ಅಲ್ಲದೇ ಮನಬಂದಂತೆ ಹಲ್ಲೆ ಮಾಡಿ ಬರೆ ಹಾಕಿದ್ದಾನೆ ಎಂದು ಪೊಲೀಸನ ಹೆಂಡತಿ ಪ್ರತಿಮಾ ಎಲ್ಲಪ್ಪ ಅಸಿಗೆ ಆರೋಪಿಸಿದ್ದಾರೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಪ್ರತಿಮಾಗೆ ಅಥಣಿ ತಾಲೂಕಿನ ಕುನ್ನಾಳ ಗ್ರಾಮದ ಯಲ್ಲಪ್ಪ ಅಗಸೆಗೆ ಕಳೆದ ಹತ್ತು ವರ್ಷಗಳ ಹಿಂದೆಯೇ ಮದುವೆ ಮಾಡಿಕೊಡಲಾಗಿತ್ತು.

ಸದ್ಯ ಯಲ್ಲಪ್ಪ ವಿಜಯಪುರ ತಾಲೂಕಿನ ತಿಕೋಟಾದಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾನೆ ಇವರಿಗೆ ಮೂವರು ಮಕ್ಕಳಿದ್ದಾರೆ. ಪ್ರತಿಮಾ ಜೊತೆ ಹತ್ತು ವರ್ಷಗಳ ತುಂಬಾ ಸಂಸಾರ ನಡೆಸಿದ್ದ ಎಲ್ಲಪ್ಪ ಇತ್ತೀಚಿಗೆ ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿ ಹಾಕಿದ್ದಾನೆ, ಅಲ್ಲದೆ ಮನಬಂದಂತೆ ಹಲ್ಲೆ ಮಾಡಿ ಮುಖ, ಕುತ್ತಿಗೆ, ಕೈ, ಕಾಲು ಸುಟ್ಟು ಹೋಗುವಂತೆ ಬರೆ ಹಾಕಿದ್ದಾನೆ ನನ್ನ ಪತಿ ಮಾತ್ರ ನನ್ನ ಮೇಲೆ ಹಲ್ಲೆ ಮಾಡಿಲ್ಲ, ಅವನ ಅಕ್ಕ-ತಂಗಿಯರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವುದು ಪ್ರತಿಮಾ ಅವರ ಆರೋಪವಾಗಿದೆ. ನನ್ನ ತವರು ಮನೆಯರು ನನ್ನನ್ನು ನೋಡಲು ಬಂದಾಗ ಅವರಿಗೂ ಸಹ ನನ್ನ ಪತಿ ಬೆದರಿಕೆ ಹಾಕಿದ್ದಾರೆ, ಅಲ್ಲದೆ ನಿಮ್ಮ ಮಗಳು ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ಎಂದು ನಿಮ್ಮ ಮೇಲೆ ಪ್ರಕರಣವನ್ನು ದಾಖಲಿಸಿ ಒದ್ದು ಒಳಗೆ ಹಾಕಿಸಬೇಕಾಗುತ್ತದೆ ಎಂದು ನನ್ನ ಪೋಷಕರನ್ನು ಹೆದರಿಸಿದ್ದಾರೆ.

ಶೆಡ್ ನಲ್ಲಿ ಯಾರು ಇಲ್ಲದ ವೇಳೆ ತಪ್ಪಿಸಿಕೊಂಡು ಬಂದು ಬೆಳಗಾವಿಯ ಮಹಿಳಾ ಸಂಘದ ಸಹಾಯದಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಡಾ. ಭೀಮಾ ಶಂಕರ್ ಗುಳೇದ ಅವರನ್ನು ಭೇಟಿಯಾಗಿ ನನ್ನ ಪತಿಯ ಮೇಲೆ ಪ್ರಕರಣವನ್ನು ದಾಖಲಿಸುತ್ತೇನೆ ಎಂದು ಪ್ರತಿಮಾ ಅವರು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago