Crime

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟು ಮಾರಣಾಂತಿಕ ಹಲ್ಲೆ ಮಾಡಿದ್ದಲ್ಲದೆ ಮನಸೋ ಇಚ್ಚೆ ಮೈಮೇಲೆ ಬರೆ ಎಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ತಿಕೋಟದಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವ್ಯಕ್ತಿ ಒಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಎರಡು ತಿಂಗಳಿನಿಂದ ಶೆಡ್ ನಲ್ಲಿ ಕೂಡಿಟ್ಟಿದ್ದಾನೆ ಅಲ್ಲದೇ ಮನಬಂದಂತೆ ಹಲ್ಲೆ ಮಾಡಿ ಬರೆ ಹಾಕಿದ್ದಾನೆ ಎಂದು ಪೊಲೀಸನ ಹೆಂಡತಿ ಪ್ರತಿಮಾ ಎಲ್ಲಪ್ಪ ಅಸಿಗೆ ಆರೋಪಿಸಿದ್ದಾರೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಪ್ರತಿಮಾಗೆ ಅಥಣಿ ತಾಲೂಕಿನ ಕುನ್ನಾಳ ಗ್ರಾಮದ ಯಲ್ಲಪ್ಪ ಅಗಸೆಗೆ ಕಳೆದ ಹತ್ತು ವರ್ಷಗಳ ಹಿಂದೆಯೇ ಮದುವೆ ಮಾಡಿಕೊಡಲಾಗಿತ್ತು.

ಸದ್ಯ ಯಲ್ಲಪ್ಪ ವಿಜಯಪುರ ತಾಲೂಕಿನ ತಿಕೋಟಾದಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾನೆ ಇವರಿಗೆ ಮೂವರು ಮಕ್ಕಳಿದ್ದಾರೆ. ಪ್ರತಿಮಾ ಜೊತೆ ಹತ್ತು ವರ್ಷಗಳ ತುಂಬಾ ಸಂಸಾರ ನಡೆಸಿದ್ದ ಎಲ್ಲಪ್ಪ ಇತ್ತೀಚಿಗೆ ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿ ಹಾಕಿದ್ದಾನೆ, ಅಲ್ಲದೆ ಮನಬಂದಂತೆ ಹಲ್ಲೆ ಮಾಡಿ ಮುಖ, ಕುತ್ತಿಗೆ, ಕೈ, ಕಾಲು ಸುಟ್ಟು ಹೋಗುವಂತೆ ಬರೆ ಹಾಕಿದ್ದಾನೆ ನನ್ನ ಪತಿ ಮಾತ್ರ ನನ್ನ ಮೇಲೆ ಹಲ್ಲೆ ಮಾಡಿಲ್ಲ, ಅವನ ಅಕ್ಕ-ತಂಗಿಯರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವುದು ಪ್ರತಿಮಾ ಅವರ ಆರೋಪವಾಗಿದೆ. ನನ್ನ ತವರು ಮನೆಯರು ನನ್ನನ್ನು ನೋಡಲು ಬಂದಾಗ ಅವರಿಗೂ ಸಹ ನನ್ನ ಪತಿ ಬೆದರಿಕೆ ಹಾಕಿದ್ದಾರೆ, ಅಲ್ಲದೆ ನಿಮ್ಮ ಮಗಳು ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ಎಂದು ನಿಮ್ಮ ಮೇಲೆ ಪ್ರಕರಣವನ್ನು ದಾಖಲಿಸಿ ಒದ್ದು ಒಳಗೆ ಹಾಕಿಸಬೇಕಾಗುತ್ತದೆ ಎಂದು ನನ್ನ ಪೋಷಕರನ್ನು ಹೆದರಿಸಿದ್ದಾರೆ.

ಶೆಡ್ ನಲ್ಲಿ ಯಾರು ಇಲ್ಲದ ವೇಳೆ ತಪ್ಪಿಸಿಕೊಂಡು ಬಂದು ಬೆಳಗಾವಿಯ ಮಹಿಳಾ ಸಂಘದ ಸಹಾಯದಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಡಾ. ಭೀಮಾ ಶಂಕರ್ ಗುಳೇದ ಅವರನ್ನು ಭೇಟಿಯಾಗಿ ನನ್ನ ಪತಿಯ ಮೇಲೆ ಪ್ರಕರಣವನ್ನು ದಾಖಲಿಸುತ್ತೇನೆ ಎಂದು ಪ್ರತಿಮಾ ಅವರು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

6 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

6 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago