Crime

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟು ಮಾರಣಾಂತಿಕ ಹಲ್ಲೆ ಮಾಡಿದ್ದಲ್ಲದೆ ಮನಸೋ ಇಚ್ಚೆ ಮೈಮೇಲೆ ಬರೆ ಎಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ತಿಕೋಟದಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವ್ಯಕ್ತಿ ಒಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಎರಡು ತಿಂಗಳಿನಿಂದ ಶೆಡ್ ನಲ್ಲಿ ಕೂಡಿಟ್ಟಿದ್ದಾನೆ ಅಲ್ಲದೇ ಮನಬಂದಂತೆ ಹಲ್ಲೆ ಮಾಡಿ ಬರೆ ಹಾಕಿದ್ದಾನೆ ಎಂದು ಪೊಲೀಸನ ಹೆಂಡತಿ ಪ್ರತಿಮಾ ಎಲ್ಲಪ್ಪ ಅಸಿಗೆ ಆರೋಪಿಸಿದ್ದಾರೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಪ್ರತಿಮಾಗೆ ಅಥಣಿ ತಾಲೂಕಿನ ಕುನ್ನಾಳ ಗ್ರಾಮದ ಯಲ್ಲಪ್ಪ ಅಗಸೆಗೆ ಕಳೆದ ಹತ್ತು ವರ್ಷಗಳ ಹಿಂದೆಯೇ ಮದುವೆ ಮಾಡಿಕೊಡಲಾಗಿತ್ತು.

ಸದ್ಯ ಯಲ್ಲಪ್ಪ ವಿಜಯಪುರ ತಾಲೂಕಿನ ತಿಕೋಟಾದಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾನೆ ಇವರಿಗೆ ಮೂವರು ಮಕ್ಕಳಿದ್ದಾರೆ. ಪ್ರತಿಮಾ ಜೊತೆ ಹತ್ತು ವರ್ಷಗಳ ತುಂಬಾ ಸಂಸಾರ ನಡೆಸಿದ್ದ ಎಲ್ಲಪ್ಪ ಇತ್ತೀಚಿಗೆ ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿ ಹಾಕಿದ್ದಾನೆ, ಅಲ್ಲದೆ ಮನಬಂದಂತೆ ಹಲ್ಲೆ ಮಾಡಿ ಮುಖ, ಕುತ್ತಿಗೆ, ಕೈ, ಕಾಲು ಸುಟ್ಟು ಹೋಗುವಂತೆ ಬರೆ ಹಾಕಿದ್ದಾನೆ ನನ್ನ ಪತಿ ಮಾತ್ರ ನನ್ನ ಮೇಲೆ ಹಲ್ಲೆ ಮಾಡಿಲ್ಲ, ಅವನ ಅಕ್ಕ-ತಂಗಿಯರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವುದು ಪ್ರತಿಮಾ ಅವರ ಆರೋಪವಾಗಿದೆ. ನನ್ನ ತವರು ಮನೆಯರು ನನ್ನನ್ನು ನೋಡಲು ಬಂದಾಗ ಅವರಿಗೂ ಸಹ ನನ್ನ ಪತಿ ಬೆದರಿಕೆ ಹಾಕಿದ್ದಾರೆ, ಅಲ್ಲದೆ ನಿಮ್ಮ ಮಗಳು ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ಎಂದು ನಿಮ್ಮ ಮೇಲೆ ಪ್ರಕರಣವನ್ನು ದಾಖಲಿಸಿ ಒದ್ದು ಒಳಗೆ ಹಾಕಿಸಬೇಕಾಗುತ್ತದೆ ಎಂದು ನನ್ನ ಪೋಷಕರನ್ನು ಹೆದರಿಸಿದ್ದಾರೆ.

ಶೆಡ್ ನಲ್ಲಿ ಯಾರು ಇಲ್ಲದ ವೇಳೆ ತಪ್ಪಿಸಿಕೊಂಡು ಬಂದು ಬೆಳಗಾವಿಯ ಮಹಿಳಾ ಸಂಘದ ಸಹಾಯದಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಡಾ. ಭೀಮಾ ಶಂಕರ್ ಗುಳೇದ ಅವರನ್ನು ಭೇಟಿಯಾಗಿ ನನ್ನ ಪತಿಯ ಮೇಲೆ ಪ್ರಕರಣವನ್ನು ದಾಖಲಿಸುತ್ತೇನೆ ಎಂದು ಪ್ರತಿಮಾ ಅವರು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago