Corruption

“ಒಂದೇ ದಿನಕ್ಕೆ ಹೊಸ ರಸ್ತೆಯಲ್ಲಿ ಗುಂಡಿ! – ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ”

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ತೊಪ್ಪನಹಳ್ಳಿ ಗ್ರಾಮದಿಂದ ಚಾಮನಹಳ್ಳಿ ಗ್ರಾಮದತ್ತ ನಿರ್ಮಿಸಲಾದ ಹೊಸ ಡಾಂಬರ್ ರಸ್ತೆ ಕೇವಲ ಒಂದು ದಿನದಲ್ಲೇ ಹಾನಿಗೊಂಡಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಒಂದೇ ದಿನದಲ್ಲಿ ರಸ್ತೆಯಲ್ಲಿ ಗುಂಡಿ!

ಮಾರ್ಚ್ 15, 2025ರಂದು ಈ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಆದರೆ 16, 2025ರಂದೇ ಹೊಸ ರಸ್ತೆ ನಜ್ಜುಗುಜ್ಜಾಗಿದ್ದು, ಕೆಲವು ಭಾಗಗಳಲ್ಲಿ ಡಾಂಬರ್ ಬೇರ್ಪಟ್ಟಿದೆ. ಹೀಗಾಗಿ ಸ್ಥಳೀಯರು ಕಳಪೆ ಗುಣಮಟ್ಟದ ಕಾಮಗಾರಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ಪ್ರತಿಕ್ರಿಯೆ

ಈ ಕುರಿತು ಕೋಲಾರ ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ. ಬಂಗಾರಪೇಟೆ ತಾಲೂಕು ಜೂನಿಯರ್ ಇಂಜಿನಿಯರ್ ಶ್ರೀನಿವಾಸ್ ಪ್ರತಿಕ್ರಿಯಿಸಿ, “ನಮಗೆ ಸರ್ಕಾರದಿಂದ ಅನುಮತಿ ಇರುವುದು 20 ಎಂಎಂ ರಸ್ತೆ ಮಾತ್ರ ಹಾಗಾಗಿ ವೊಂದು ಕಡೆ ಮಾತ್ರ ರಸ್ತೆ ಕಿತ್ತುಹೋಗಿರುವುದು ಗಮನಕ್ಕೆ ಬಂದಿದೆ, ಕೆಲವೊಮ್ಮೆ ಇಂತಹ ಘಟನೆ ನಡೆಯುವುದು ಸಹಜ ಕೂಡಲೇ ಸರಿಪಡಿಸಲು ಕಳುಹಿಸಿಕೊಡಲಾಗಿದೆ” ಎಂದು ಹೇಳಿದ್ದಾರೆ.

ಸಾರ್ವಜನಿಕರ ಆಕ್ರೋಶ

ಆದರೆ ಸ್ಥಳೀಯರ ಪ್ರಕಾರ, ಈ ಹೊಸ ರಸ್ತೆಯ ಹಲವು ಭಾಗಗಳಲ್ಲಿ ಬಿರುಕು, ಗುಂಡಿ ಕಾಣಿಸಿಕೊಂಡಿದೆ. ಗುಣಮಟ್ಟವಿಲ್ಲದ ಕಾಮಗಾರಿ, ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರದ ಸುತ್ತ ಒತ್ತಿಹೇಳಿದ ಅವರು, ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ವರದಿ: ರೋಶನ್

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago