ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ತೊಪ್ಪನಹಳ್ಳಿ ಗ್ರಾಮದಿಂದ ಚಾಮನಹಳ್ಳಿ ಗ್ರಾಮದತ್ತ ನಿರ್ಮಿಸಲಾದ ಹೊಸ ಡಾಂಬರ್ ರಸ್ತೆ ಕೇವಲ ಒಂದು ದಿನದಲ್ಲೇ ಹಾನಿಗೊಂಡಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಒಂದೇ ದಿನದಲ್ಲಿ ರಸ್ತೆಯಲ್ಲಿ ಗುಂಡಿ!
ಮಾರ್ಚ್ 15, 2025ರಂದು ಈ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಆದರೆ 16, 2025ರಂದೇ ಹೊಸ ರಸ್ತೆ ನಜ್ಜುಗುಜ್ಜಾಗಿದ್ದು, ಕೆಲವು ಭಾಗಗಳಲ್ಲಿ ಡಾಂಬರ್ ಬೇರ್ಪಟ್ಟಿದೆ. ಹೀಗಾಗಿ ಸ್ಥಳೀಯರು ಕಳಪೆ ಗುಣಮಟ್ಟದ ಕಾಮಗಾರಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳ ಪ್ರತಿಕ್ರಿಯೆ
ಈ ಕುರಿತು ಕೋಲಾರ ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ. ಬಂಗಾರಪೇಟೆ ತಾಲೂಕು ಜೂನಿಯರ್ ಇಂಜಿನಿಯರ್ ಶ್ರೀನಿವಾಸ್ ಪ್ರತಿಕ್ರಿಯಿಸಿ, “ನಮಗೆ ಸರ್ಕಾರದಿಂದ ಅನುಮತಿ ಇರುವುದು 20 ಎಂಎಂ ರಸ್ತೆ ಮಾತ್ರ ಹಾಗಾಗಿ ವೊಂದು ಕಡೆ ಮಾತ್ರ ರಸ್ತೆ ಕಿತ್ತುಹೋಗಿರುವುದು ಗಮನಕ್ಕೆ ಬಂದಿದೆ, ಕೆಲವೊಮ್ಮೆ ಇಂತಹ ಘಟನೆ ನಡೆಯುವುದು ಸಹಜ ಕೂಡಲೇ ಸರಿಪಡಿಸಲು ಕಳುಹಿಸಿಕೊಡಲಾಗಿದೆ” ಎಂದು ಹೇಳಿದ್ದಾರೆ.
ಸಾರ್ವಜನಿಕರ ಆಕ್ರೋಶ
ಆದರೆ ಸ್ಥಳೀಯರ ಪ್ರಕಾರ, ಈ ಹೊಸ ರಸ್ತೆಯ ಹಲವು ಭಾಗಗಳಲ್ಲಿ ಬಿರುಕು, ಗುಂಡಿ ಕಾಣಿಸಿಕೊಂಡಿದೆ. ಗುಣಮಟ್ಟವಿಲ್ಲದ ಕಾಮಗಾರಿ, ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರದ ಸುತ್ತ ಒತ್ತಿಹೇಳಿದ ಅವರು, ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ವರದಿ: ರೋಶನ್
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…