Latest

ಹದಗೆಟ್ಟ ರಸ್ತೆಗೆ ಗರ್ಭಿಣಿ ಜೀವ ಬಲಿ!

ಮೈಸೂರಿನಿಂದ ತಮ್ಮ ಸ್ವಗ್ರಾಮಕ್ಕೆ ಗರ್ಭಿಣಿ ಮಹಿಳೆ ಛಾಯಾದೇವಿ ಹಾಗೂ ಕಾರ್ತಿಕ್ ಎಂಬುವವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ತರಿಪುರ ಸಮೀಪದ ರಸ್ತೆಯಲ್ಲಿ ಅಧಿಕವಾದ ಗುಂಡಿಗಳಿದ್ದು ಸಂಪೂರ್ಣ ರಸ್ತೆ ಹದಗೆಟ್ಟ ಪರಿಣಾಮ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಕಾರ್ತಿಕ್ ಹಾಗೂ ಗರ್ಭಿಣಿ ಮಹಿಳೆ ಛಾಯಾದೇವಿ ತೀವ್ರವಾಗಿ ಗಾಯಗೊಂಡಿರುತ್ತಾರೆ.
ಛಾಯಾದೇವಿ ತೀವ್ರವಾಗಿ ಗಾಯಗೊಂಡಿದ್ದ ಪರಿಣಾಮ ಮೃತಪಟ್ಟಿರುತ್ತಾರೆ.
ತರಿಪುರ ಮತ್ತು ಮಹಾದೇವಪುರ ಮಾರ್ಗದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಈ ವಿಚಾರವಾಗಿ ಗ್ರಾಮಸ್ಥರು ಹಲವು ಬಾರಿ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರು ಸಹ ರಸ್ತೆ ದುರಸ್ತಿಗೆ ಯಾರೊಬ್ಬರೂ ಮುಂದಾಗಿರುವುದಿಲ್ಲ.
ಹದಗೆಟ್ಟಿರುವ ರಸ್ತೆಯಿಂದ ಗರ್ಭಿಣಿಯೊಬ್ಬಳು ಸಾವನ್ನಪ್ಪಿರುವ ಕುರಿತು, ಇದಕ್ಕೆ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷವೇ ಕಾರಣ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು. ಈ ಕುರಿತು ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಭ್ರಷ್ಟರ ಬೇಟೆ

Recent Posts

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

2 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

3 hours ago

ಮುತ್ತತ್ತಿಯಲ್ಲಿ ದಾರುಣ ದುರಂತ: ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…

3 hours ago

₹15 ಲಕ್ಷ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ! ಅಪಘಾತದ ನಾಟಕ ಬಯಲು ಮಾಡಿದ ಪೊಲೀಸರ ಚಾಣಾಕ್ಷ ತನಿಖೆ

ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…

3 hours ago

ವಿದ್ಯಾರ್ಥಿ ಸಾವಿನ ಪ್ರಕರಣ; ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲು

ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…

3 hours ago

ರೌಡಿಶೀಟರ್‌ಗಳು ಮತ್ತು ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರ ಶಾಕ್; ಮನೆಗಳ ಮೇಲೆ ದಿಢೀರ್ ದಾಳಿ!

ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…

3 hours ago