Latest

140 ವರ್ಷಗಳ ನಂತರ ಕಂಡ ಅಪರೂಪದ ಪಕ್ಷಿ

ಅಳಿವಿನಂಚಿನಲ್ಲಿರುವ ಯಾವುದೇ ಪಕ್ಷಿ ಪ್ರಭೇದಗಳು ಮತ್ತೆ ಕಾಣಿಸಿಕೊಳ್ಳುವುದು ಬಹಳ ಅಪರೂಪ. ಇಂತಹ ಅಪರೂಪದ ಘಟನೆ ಇದೀಗ ನಡೆದಿದೆ. ಸುಮಾರು 140 ವರ್ಷಗಳ ಹಿಂದೆ ಕಣ್ಮರೆಯಾಯಿತು ಎಂದು ವಿಜ್ಞಾನಿಗಳು ಭಾವಿಸಿದ್ದ ಅಪರೂಪದ ಪಕ್ಷಿ ಮತ್ತೆ ಕಾಣಿಸಿಕೊಂಡಿದೆ.
ಇದು ನವಿಲನ್ನು ಹೋಲುವ ಪಾರಿವಾಳ. ಆದರೆ, ಸಾಮಾನ್ಯ ಪಾರಿವಾಳದಂತಲ್ಲ!. ಒಂದು ಕೋಳಿ ಗಾತ್ರದಂತೆ ತುಂಬಾ ದೊಡ್ಡದಾಗಿದ್ದು, ಕಪ್ಪು ಮತ್ತು ಬಂಗಾರದ ಬಣ್ಣವನ್ನು ಹೋಲುತ್ತದೆ. ಅದರ ಬಾಲವು ನವಿಲಿನ ಹಾಗೆ ತುಂಬಾ ದೊಡ್ಡದಾಗಿದೆ. ಪಪುವಾ ನ್ಯೂಗಿನಿಯಾದ ಅರಣ್ಯದಲ್ಲಿ ಇತ್ತೀಚೆಗೆ ಸಂಶೋಧಕರು ಈ ಪಕ್ಷಿಯನ್ನು ಗುರುತಿಸಿದ್ದಾರೆ. 140 ವರ್ಷಗಳ ನಂತರ ಮತ್ತೊಮ್ಮೆ ಈ ಪಕ್ಷಿಯನ್ನು ನೋಡಿ ವಿಜ್ಞಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಸಂಶೋಧಕರು ಈ ಹಕ್ಕಿಯ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ. ತಜ್ಞರು ಸುಮಾರು ಒಂದು ತಿಂಗಳ ಕಾಲ ಶ್ರಮಪಟ್ಟ ಬಳಿಕ ಕಳೆದ ಸೆಪ್ಟೆಂಬರ್‌ನಲ್ಲಿ ಈ ವೀಡಿಯೊ ಮಾಡಲು ಸಾಧ್ಯವಾಗಿದೆ.
ಅಳಿವಿನಂಚಿನಲ್ಲಿರುವ 20 ಅಪರೂಪದ ಪಕ್ಷಿ ಪ್ರಭೇದಗಳಲ್ಲಿ ಈ ಪಾರಿವಾಳವೂ ಸೇರಿದೆ. 1882 ರಿಂದ ಈ ಹಕ್ಕಿ ಕಾಣಿಸಿಕೊಂಡಿಲ್ಲ. ಸದ್ಯ ಈ ಹಕ್ಕಿಯ ವಿಡಿಯೋ ನೆಟ್ಟಿಗರನ್ನು ಸೆಳೆಯುತ್ತಿದೆ.

ಭ್ರಷ್ಟರ ಬೇಟೆ

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

5 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

5 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

6 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

6 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

6 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

6 hours ago