Latest

ಅಕ್ಕಿ ವ್ಯಾಪಾರಿ ಬಳಿ 5 ಲಕ್ಷ ರೂ.ಗೆ ಬೆದರಿಕೆ – ಪೊಲೀಸರ ಕೈಗೆ ಸಿಕ್ಕಿಬಿದ್ದ 6 ಮಂದಿ ನಕಲಿ ಪತ್ರಕರ್ತರು..!

ರಾಯಚೂರು : ಅಕ್ಕಿ ವ್ಯಾಪಾರಿ ಒಬ್ಬರಿಗೆ ಬೆದರಿಕೆವೊಡ್ಡಿ ಐದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರು ಮೂಲದ 6 ಮಂದಿ ನಕಲಿ ಪತ್ರಕರ್ತರನ್ನು ರಾಯಚೂರು ಪೊಲೀಸರು ಬಂಧಿಸಿರುವುದಾಗಿ ಬುಧವಾರ ಬೆಳಗ್ಗೆ ವರದಿಯಾಗಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬಂಧಿತ ನಕಲಿ ಪತ್ರಕರ್ತರಲ್ಲಿ ಮೂವರು ಮಹಿಳೆ ಹಾಗೂ ಮೂವರು ಪುರುಷರು. ಬಂಧಿತರನ್ನು ರಾಜು ಬಿ, ನಾಗರಾಜ ಸಿ, ಪ್ರದೀಪಗೌಡ, ಅರ್ಪಿತಾ, ಮಹಾದೇವಿ, ಮಘಾ ಎಸ್ ಎಂದು ಗುರುತಿಸಲಾಗಿದೆ. ಆರು ಮಂದಿಯು ಕೂಡ ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಕೆ ಹಾಕುತ್ತಿದ್ದರು.ಯೂಟ್ಯೂಬ್ ಚಾನಲ್ ಹೆಸರೇಳಿಕೊಂಡು ಸ್ಥಳೀಯ ಅಕ್ಕಿ ಮಾರಾಟಗಾರರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಲಾಗಿದೆ. ಅಕ್ಕಿ ವ್ಯಾಪಾರಿ ವೀರೇಶ್ ಎನ್ನುವವರ ಅಂಗಡಿಗೆ ಕ್ಯಾಮೆರಾ ಮತ್ತು ಲೋಗೋ ಹಿಡಿದು ನುಗ್ಗಿದ ಆರೋಪಿಗಳು, ನೀವು ಅಕ್ರಮವಾಗಿ ಪಡಿತರ ಆಹಾರ ಧಾನ್ಯದ ಅಕ್ಕಿ ಮಾರಾಟ ಮಾಡುತಿದ್ದೀರಿ, ನಿಮ್ಮ ಬಗ್ಗೆ ಸುದ್ದಿವಾಹಿನಿಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ಬೆದರಿಕೆ ಹಾಕಿದರು.

ಸುದ್ದಿ ಪ್ರಸಾರ ಮಾಡಬಾರದೆಂದರೆ, 5 ಲಕ್ಷ ರೂಪಾಯಿ ಕೊಡಿ ಇಲ್ಲವಾದಲ್ಲಿ ಸುದ್ದಿ ಪ್ರಸಾರ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಆರೋಪಿಗಳ ವರ್ತನೆಯಿಂದ ಅನುಮಾನಗೊಂಡ ವೀರೇಶ್, ಕೂಡಲೇ ಪೊಲೀಸರಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಮುದಗಲ್ ಪೊಲೀಸರು ನಕಲಿ ಪತ್ರಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಕ್ಯಾಮೆರಾ, ಐಡಿ ಕಾರ್ಡ್ ಹಾಗೂ ಮಾರುತಿ ಸ್ವಿಫ್ಟ್ ಕಾರ್ ಅನ್ನು ಜಪ್ತಿ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago