Latest

ಅಕ್ಕಿ ವ್ಯಾಪಾರಿ ಬಳಿ 5 ಲಕ್ಷ ರೂ.ಗೆ ಬೆದರಿಕೆ – ಪೊಲೀಸರ ಕೈಗೆ ಸಿಕ್ಕಿಬಿದ್ದ 6 ಮಂದಿ ನಕಲಿ ಪತ್ರಕರ್ತರು..!

ರಾಯಚೂರು : ಅಕ್ಕಿ ವ್ಯಾಪಾರಿ ಒಬ್ಬರಿಗೆ ಬೆದರಿಕೆವೊಡ್ಡಿ ಐದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರು ಮೂಲದ 6 ಮಂದಿ ನಕಲಿ ಪತ್ರಕರ್ತರನ್ನು ರಾಯಚೂರು ಪೊಲೀಸರು ಬಂಧಿಸಿರುವುದಾಗಿ ಬುಧವಾರ ಬೆಳಗ್ಗೆ ವರದಿಯಾಗಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬಂಧಿತ ನಕಲಿ ಪತ್ರಕರ್ತರಲ್ಲಿ ಮೂವರು ಮಹಿಳೆ ಹಾಗೂ ಮೂವರು ಪುರುಷರು. ಬಂಧಿತರನ್ನು ರಾಜು ಬಿ, ನಾಗರಾಜ ಸಿ, ಪ್ರದೀಪಗೌಡ, ಅರ್ಪಿತಾ, ಮಹಾದೇವಿ, ಮಘಾ ಎಸ್ ಎಂದು ಗುರುತಿಸಲಾಗಿದೆ. ಆರು ಮಂದಿಯು ಕೂಡ ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಕೆ ಹಾಕುತ್ತಿದ್ದರು.ಯೂಟ್ಯೂಬ್ ಚಾನಲ್ ಹೆಸರೇಳಿಕೊಂಡು ಸ್ಥಳೀಯ ಅಕ್ಕಿ ಮಾರಾಟಗಾರರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಲಾಗಿದೆ. ಅಕ್ಕಿ ವ್ಯಾಪಾರಿ ವೀರೇಶ್ ಎನ್ನುವವರ ಅಂಗಡಿಗೆ ಕ್ಯಾಮೆರಾ ಮತ್ತು ಲೋಗೋ ಹಿಡಿದು ನುಗ್ಗಿದ ಆರೋಪಿಗಳು, ನೀವು ಅಕ್ರಮವಾಗಿ ಪಡಿತರ ಆಹಾರ ಧಾನ್ಯದ ಅಕ್ಕಿ ಮಾರಾಟ ಮಾಡುತಿದ್ದೀರಿ, ನಿಮ್ಮ ಬಗ್ಗೆ ಸುದ್ದಿವಾಹಿನಿಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ಬೆದರಿಕೆ ಹಾಕಿದರು.

ಸುದ್ದಿ ಪ್ರಸಾರ ಮಾಡಬಾರದೆಂದರೆ, 5 ಲಕ್ಷ ರೂಪಾಯಿ ಕೊಡಿ ಇಲ್ಲವಾದಲ್ಲಿ ಸುದ್ದಿ ಪ್ರಸಾರ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಆರೋಪಿಗಳ ವರ್ತನೆಯಿಂದ ಅನುಮಾನಗೊಂಡ ವೀರೇಶ್, ಕೂಡಲೇ ಪೊಲೀಸರಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಮುದಗಲ್ ಪೊಲೀಸರು ನಕಲಿ ಪತ್ರಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಕ್ಯಾಮೆರಾ, ಐಡಿ ಕಾರ್ಡ್ ಹಾಗೂ ಮಾರುತಿ ಸ್ವಿಫ್ಟ್ ಕಾರ್ ಅನ್ನು ಜಪ್ತಿ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

6 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

7 days ago