ರಾಯಚೂರು : ಅಕ್ಕಿ ವ್ಯಾಪಾರಿ ಒಬ್ಬರಿಗೆ ಬೆದರಿಕೆವೊಡ್ಡಿ ಐದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರು ಮೂಲದ 6 ಮಂದಿ ನಕಲಿ ಪತ್ರಕರ್ತರನ್ನು ರಾಯಚೂರು ಪೊಲೀಸರು ಬಂಧಿಸಿರುವುದಾಗಿ ಬುಧವಾರ ಬೆಳಗ್ಗೆ ವರದಿಯಾಗಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬಂಧಿತ ನಕಲಿ ಪತ್ರಕರ್ತರಲ್ಲಿ ಮೂವರು ಮಹಿಳೆ ಹಾಗೂ ಮೂವರು ಪುರುಷರು. ಬಂಧಿತರನ್ನು ರಾಜು ಬಿ, ನಾಗರಾಜ ಸಿ, ಪ್ರದೀಪಗೌಡ, ಅರ್ಪಿತಾ, ಮಹಾದೇವಿ, ಮಘಾ ಎಸ್ ಎಂದು ಗುರುತಿಸಲಾಗಿದೆ. ಆರು ಮಂದಿಯು ಕೂಡ ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಕೆ ಹಾಕುತ್ತಿದ್ದರು.ಯೂಟ್ಯೂಬ್ ಚಾನಲ್ ಹೆಸರೇಳಿಕೊಂಡು ಸ್ಥಳೀಯ ಅಕ್ಕಿ ಮಾರಾಟಗಾರರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಲಾಗಿದೆ. ಅಕ್ಕಿ ವ್ಯಾಪಾರಿ ವೀರೇಶ್ ಎನ್ನುವವರ ಅಂಗಡಿಗೆ ಕ್ಯಾಮೆರಾ ಮತ್ತು ಲೋಗೋ ಹಿಡಿದು ನುಗ್ಗಿದ ಆರೋಪಿಗಳು, ನೀವು ಅಕ್ರಮವಾಗಿ ಪಡಿತರ ಆಹಾರ ಧಾನ್ಯದ ಅಕ್ಕಿ ಮಾರಾಟ ಮಾಡುತಿದ್ದೀರಿ, ನಿಮ್ಮ ಬಗ್ಗೆ ಸುದ್ದಿವಾಹಿನಿಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ಬೆದರಿಕೆ ಹಾಕಿದರು.
ಸುದ್ದಿ ಪ್ರಸಾರ ಮಾಡಬಾರದೆಂದರೆ, 5 ಲಕ್ಷ ರೂಪಾಯಿ ಕೊಡಿ ಇಲ್ಲವಾದಲ್ಲಿ ಸುದ್ದಿ ಪ್ರಸಾರ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಆರೋಪಿಗಳ ವರ್ತನೆಯಿಂದ ಅನುಮಾನಗೊಂಡ ವೀರೇಶ್, ಕೂಡಲೇ ಪೊಲೀಸರಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಮುದಗಲ್ ಪೊಲೀಸರು ನಕಲಿ ಪತ್ರಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಕ್ಯಾಮೆರಾ, ಐಡಿ ಕಾರ್ಡ್ ಹಾಗೂ ಮಾರುತಿ ಸ್ವಿಫ್ಟ್ ಕಾರ್ ಅನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…