Latest

ಅಕ್ಕಿ ವ್ಯಾಪಾರಿ ಬಳಿ 5 ಲಕ್ಷ ರೂ.ಗೆ ಬೆದರಿಕೆ – ಪೊಲೀಸರ ಕೈಗೆ ಸಿಕ್ಕಿಬಿದ್ದ 6 ಮಂದಿ ನಕಲಿ ಪತ್ರಕರ್ತರು..!

ರಾಯಚೂರು : ಅಕ್ಕಿ ವ್ಯಾಪಾರಿ ಒಬ್ಬರಿಗೆ ಬೆದರಿಕೆವೊಡ್ಡಿ ಐದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರು ಮೂಲದ 6 ಮಂದಿ ನಕಲಿ ಪತ್ರಕರ್ತರನ್ನು ರಾಯಚೂರು ಪೊಲೀಸರು ಬಂಧಿಸಿರುವುದಾಗಿ ಬುಧವಾರ ಬೆಳಗ್ಗೆ ವರದಿಯಾಗಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬಂಧಿತ ನಕಲಿ ಪತ್ರಕರ್ತರಲ್ಲಿ ಮೂವರು ಮಹಿಳೆ ಹಾಗೂ ಮೂವರು ಪುರುಷರು. ಬಂಧಿತರನ್ನು ರಾಜು ಬಿ, ನಾಗರಾಜ ಸಿ, ಪ್ರದೀಪಗೌಡ, ಅರ್ಪಿತಾ, ಮಹಾದೇವಿ, ಮಘಾ ಎಸ್ ಎಂದು ಗುರುತಿಸಲಾಗಿದೆ. ಆರು ಮಂದಿಯು ಕೂಡ ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಕೆ ಹಾಕುತ್ತಿದ್ದರು.ಯೂಟ್ಯೂಬ್ ಚಾನಲ್ ಹೆಸರೇಳಿಕೊಂಡು ಸ್ಥಳೀಯ ಅಕ್ಕಿ ಮಾರಾಟಗಾರರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಲಾಗಿದೆ. ಅಕ್ಕಿ ವ್ಯಾಪಾರಿ ವೀರೇಶ್ ಎನ್ನುವವರ ಅಂಗಡಿಗೆ ಕ್ಯಾಮೆರಾ ಮತ್ತು ಲೋಗೋ ಹಿಡಿದು ನುಗ್ಗಿದ ಆರೋಪಿಗಳು, ನೀವು ಅಕ್ರಮವಾಗಿ ಪಡಿತರ ಆಹಾರ ಧಾನ್ಯದ ಅಕ್ಕಿ ಮಾರಾಟ ಮಾಡುತಿದ್ದೀರಿ, ನಿಮ್ಮ ಬಗ್ಗೆ ಸುದ್ದಿವಾಹಿನಿಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ಬೆದರಿಕೆ ಹಾಕಿದರು.

ಸುದ್ದಿ ಪ್ರಸಾರ ಮಾಡಬಾರದೆಂದರೆ, 5 ಲಕ್ಷ ರೂಪಾಯಿ ಕೊಡಿ ಇಲ್ಲವಾದಲ್ಲಿ ಸುದ್ದಿ ಪ್ರಸಾರ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಆರೋಪಿಗಳ ವರ್ತನೆಯಿಂದ ಅನುಮಾನಗೊಂಡ ವೀರೇಶ್, ಕೂಡಲೇ ಪೊಲೀಸರಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಮುದಗಲ್ ಪೊಲೀಸರು ನಕಲಿ ಪತ್ರಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಕ್ಯಾಮೆರಾ, ಐಡಿ ಕಾರ್ಡ್ ಹಾಗೂ ಮಾರುತಿ ಸ್ವಿಫ್ಟ್ ಕಾರ್ ಅನ್ನು ಜಪ್ತಿ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago