Latest

ಮರುಭೂಮಿಯಲ್ಲಿ ಚಿನ್ನ ತುಂಬಿದ ಹಡಗು

ಐನೂರು ವರ್ಷಗಳ ಹಿಂದೆ ಕಣ್ಮರೆಯಾದ ಹಡಗೊಂದು ನೈಋತ್ಯ ಆಫ್ರಿಕಾದ ಮರುಭೂಮಿಯಲ್ಲಿ ಪತ್ತೆಯಾಗಿದೆ. ಪುರಾತತ್ತ್ವ ಶಾಸ್ತ್ರದ ಸಂಶೋಧನೆಯಲ್ಲಿ ಈ ಹಡಗು ಕಂಡು ಬಂದಿದ್ದು, ವಿಶೇಷತೆ ಏನೆಂದರೆ ಹಡಗಿನಲ್ಲಿ ಸುಮಾರಷ್ಟು ಚಿನ್ನದ ನಾಣ್ಯಗಳು ಪತ್ತೆಯಾಗಿವೆ. ಬೊಮ್ ಜೀಸಸ್ (ದಿ ಗುಡ್ ಜೀಸಸ್) ಹಡಗು ಪೋರ್ಚುಗಲ್‌ನ ಲಿಸ್ಬನ್‌ನಿಂದ ಶುಕ್ರವಾರ, ಮಾರ್ಚ್ 7, 1533 ರಂದು ನೌಕಾಯಾನ ಮಾಡಿತ್ತು. ಅಂದರೆ ಸುಮಾರು ಐನೂರು ವರ್ಷಗಳ ಹಿಂದೆ ನೌಕಾಯಾನಕ್ಕೆ ಹೋಗಿದ್ದ ಹಡಗು ಕಣ್ಮರೆಯಾಗಿತ್ತು. ನಂತರ 2008ರಲ್ಲಿ ಅದರ ಅವಶೇಷಗಳು ನಮೀಬಿಯಾದ ಮರುಭೂಮಿಯಲ್ಲಿ ವಜ್ರ ಗಣಿಗಾರಿಕೆ ಕಾರ್ಯಾಚರಣೆಯ ಸಮಯದಲ್ಲಿ ಪತ್ತೆಯಾಗಿತ್ತು.
ಪ್ರಸ್ತುತ ಪೂರ್ತಿ ಹಡಗು ನೈಋತ್ಯ ಆಫ್ರಿಕಾದ ಮರುಭೂಮಿಯಲ್ಲಿ ಪತ್ತೆಯಾಗಿದೆ. ಭಾರತಕ್ಕೆ ಚಿನ್ನ ಮತ್ತು ತಾಮ್ರವನ್ನು ಈ ಹಡಗು ಹೊತ್ತು ಬರುತ್ತಿತ್ತು ಎನ್ನಲಾಗಿದೆ. ಆದರೆ ಭೀಕರ ಚಂಡಮಾರುತಕ್ಕೆ ತುತ್ತಾಗಿದ್ದ ಹಡಗು ನಾಪತ್ತೆಯಾಗಿತ್ತು.
ಈಗ ಮತ್ತೆ ಪತ್ತೆಯಾಗಿರುವ ಬೊಮ್ ಜೀಸಸ್‌ ಹಡಗಿನಲ್ಲಿ ಎರಡು ಸಾವಿರ ಶುದ್ಧ ಚಿನ್ನದ ನಾಣ್ಯಗಳು ಮತ್ತು ಹತ್ತಾರು ಸಾವಿರ ಪೌಂಡ್‌ಗಳ ತಾಮ್ರದ ಗಟ್ಟಿಗಳು ಕಂಡು ಬಂದಿವೆ. ಅಚ್ಚರಿ ಅಂದರೆ ಐನೂರು ವರ್ಷಗಳ ಹಿಂದಿನ ನಾಣ್ಯಗಳು ಸ್ವಲ್ಪವೂ ವಿರೂಪವಾಗದೇ ಹಾಗೆಯೇ ಇವೆ. ಈಗ ಕರಾವಳಿಯ ನೀರು ಕಡಿಮೆಯಾದ ಕಾರಣ ಬೊಮ್ ಜೀಸಸ್ ಮರುಭೂಮಿಯಲ್ಲಿ ಮತ್ತೆ ಕಾಣಿಸಿಕೊಂಡಿದೆ.
ಚಿನ್ನ ಸೇರಿ ಇತರೆ ಬೆಲೆಬಾಳುವ ಸರಕುಗಳು ಪತ್ತೆ. ದಕ್ಷಿಣ ಆಫ್ರಿಕಾ ಇನ್‌ಸ್ಟಿಟ್ಯೂಟ್ ಆಫ್ ಮ್ಯಾರಿಟೈಮ್ ಆರ್ಕಿಯಾಲಾಜಿಕಲ್ ರಿಸರ್ಚ್‌ನ ಮುಖ್ಯ ಪುರಾತತ್ವಶಾಸ್ತ್ರಜ್ಞ ಡಾ ನೋಲಿ, ದೇಶದ ಕರಾವಳಿಯು ಹಲವು ಚಂಡಮಾರುತಗಳಿಗೆ ಕಾರಣವಾಗಿದೆ. ಹೀಗಾಗಿ, ಹಡಗು ಹಾನಿ ಕಂಡುಬರುತ್ತಿರುವುದು ಅಷ್ಟೇನೂ ಆಶ್ಚರ್ಯಕರ ಬೆಳವಣಿಗೆಯಲ್ಲ ಎಂದು ಹೇಳಿದರು. ಉತ್ಖನನದ ಒಂದು ವಾರದ ನಂತರ, ಚಿನ್ನದಿಂದ ತುಂಬಿದ ನಿಧಿಯ ಪೆಟ್ಟಿಗೆಯು ಕಂಡುಬಂದಿದೆ, ಇದು ಚಿನ್ನದಿಂದ ತುಂಬಿದ ಹಡಗು ಎಂಬ ಪರಿಕಲ್ಪನೆಗೆ ಹೊಸ ಅರ್ಥವನ್ನು ಸೇರಿಸುತ್ತದೆ ಎಂದು ಡಾ ನೋಲಿ ಆಫ್ರೀಕಾದ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದರು.
ಚಿನ್ನ, ತಾಮ್ರದ ಜೊತೆ ಕಂಚಿನ ಬಟ್ಟಲುಗಳು, ಬೆಳ್ಳಿ ನಾಣ್ಯಗಳು ಮತ್ತು ಉದ್ದವಾದ ಲೋಹದ ಕಂಬಗಳು ಕಂಡು ಬಂದಿವೆ. ಹಾಗೆಯೇ ದಿಕ್ಸೂಚಿಗಳು, ಕತ್ತಿಗಳು, ಜ್ಯೋತಿಷ್ಯ ಉಪಕರಣಗಳು ಮತ್ತು ಸಮಯದ ಕ್ಯಾಪ್ಸುಲ್ ಹಡಗಿನಲ್ಲಿ ಪತ್ತೆಯಾಗಿವೆ ಎಂದು ವರದಿಗಳು ತಿಳಿಸಿವೆ.
ಆ ಕಾಲದ ಬಲಿಷ್ಠ ನೌಕೆ ಬೋಮ್ ಜೀಸಸ್‌ನ ಹಡಗಿನ ಇತಿಹಾಸದ ಬಗ್ಗೆ ಹೆಚ್ಚು ತಿಳಿದಿಲ್ಲವಾದರೂ, ಈ ಹಡಗು ಹಿಂದಿನ ಪೋರ್ಚುಗೀಸ್ ಮತ್ತು ಸ್ಪ್ಯಾನಿಷ್ ಹಡಗುಗಳಿಗಿಂತ ದೊಡ್ಡದಾದ, ಹೆಚ್ಚು ಪರಿಣಾಮಕಾರಿ ಮತ್ತು ಹೆಚ್ಚು ಬಾಳಿಕೆ ಬರುವ ನೌಕಾ ಹಡಗುಗಳ ಒಂದು ವರ್ಗದ ಭಾಗವಾಗಿದೆ ಎಂದು ಊಹಿಸಲಾಗಿದೆ. ಈ ಆವಿಷ್ಕಾರದ ಬಳಿಕ ಬೊಮ್ ಜೀಸಸ್ ಅನ್ನು ಉಪ-ಸಹಾರನ್ ಆಫ್ರಿಕಾದ ಪಶ್ಚಿಮ ಕರಾವಳಿಯಲ್ಲಿ ಪತ್ತೆಯಾದ ಅತ್ಯಂತ ಹಳೆಯ ಮತ್ತು ಅತ್ಯಮೂಲ್ಯವಾದ ಹಡಗು ಎನ್ನಲಾಗಿದೆ.
ಹಡಗು ಪತ್ತೆಯಾದ ಸ್ಥಿತಿಯನ್ನು ಗಮನಿಸಿದ ತಜ್ಞರು ಭೀಕರ ಚಂಡಮಾರುತಕ್ಕೆ ಸಿಕ್ಕಿ ಬಂಡೆಗೆ ಗುದ್ದಿದ ಪರಿಣಾಮ ಹಡಗು ದುರಂತ ಸಂಭವಿಸಿದೆ ಎಂದು ಊಹಿಸಿದ್ದಾರೆ. ಕೆಲವೇ ಕೆಲವು ಮಾನವ ಅವಶೇಷಗಳು ಕಂಡುಬಂದಿದ್ದು ದುರಂತದಲ್ಲಿ ಎಲ್ಲರೂ ಸಮುದ್ರಪಾಲಾಗಿರಬಹುದು ಅಥವಾ ಅಲ್ಲರೂ ಬಚಾಬ್‌ ಆಗಿರಬಹುದು ಎಂದು ತಜ್ಞರು ಹೇಳಿದ್ದಾರೆ. ಹಡಗಿನ ಅವಶೇಷಗಳು ಹಿಂದೆ ನಮೀಬಿಯಾದಲ್ಲಿ ಕಂಡುಬಂದಿದ್ದವು. ಹೆಚ್ಚಿನ ಗಣಿಗಾರಿಕೆ ನಡೆಯುತ್ತಿದ್ದ ಕಾರಣ ಸರ್ಕಾರ ಈ ಪ್ರದೇಶವನ್ನು “ನಿಷೇಧಿತ ಪ್ರದೇಶ” ಎಂದು ಗುರುತಿಸಿತು.

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

10 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

10 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

10 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

16 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

16 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

16 hours ago