ತಂದೆಯನ್ನೇ ಮಗ ಕೊಲೆ ಮಾಡಿ ದೇಹವನ್ನು ಕತ್ತರಿಸಿ ಬಿಸಾಡಿರುವ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದಿದೆ.
ಮೃತ ವ್ಯಕ್ತಿ ಮಾಜಿ ನೌಕಾಪಡೆಯ ಉಜ್ವಲ್ ಚಕ್ರವರ್ತಿ (55) ಎಂದು ಗುರುತಿಸಲಾಗಿದೆ. ಅನುಮಾನದ ಆಧಾರದ ಮೇಲೆ ಪೊಲೀಸರು ತಾಯಿ-ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.
ಮೃತನ ಪುತ್ರ ಜಾಯ್ ಪಾಲಿಟೆಕ್ನಿಕ್ ಓದುತ್ತಿದ್ದಾನೆ. ಪರೀಕ್ಷಾ ಶುಲ್ಕ್ ತುಂಬಲು 3,000 ರೂಪಾಯಿ ತಂದೆ ಬಳಿ ಕೇಳಿದ್ದಾನೆ. ಉಜ್ವಲ್ ಚಕ್ರವರ್ತಿ ಹಣ ಕೊಡಲು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಜಾನ್ ತಂದೆ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಶ್ಯಾಮಲಿ ಮತ್ತು ಮಗ ಜಾಯ್ ನನ್ನು ಪೊಲೀಸರು ಬಂಧಿಸಿದ್ದಾರೆ.
12 ವರ್ಷಗಳ ಹಿಂದೆ ಉಜ್ವಲ್ ಚಕ್ರವರ್ತಿ ಅವರು ನೌಕಪಡೆಯಿಂದ ನಿವೃತ್ತಿಯಾಗಿದ್ದರು. ತಂದೆಯನ್ನು ಕೊಲೆಗೈದ ಬಳಿಕ ತಾಯಿಯ ನೆರವಿನೊಂದಿಗೆ ಮೃತದೇಹವನ್ನು ಮಗ ಬಾತ್ ರೂಮ್ ಗೆ ಎಳೆದುಕೊಂಡು ಹೋಗಿದ್ದನು. ಅಲ್ಲಿಯೇ ಆರೋಪಿ ತನ್ನ ಕಾರ್ಪೆಂಟ್ರಿ ಕ್ಲಾಸ್ ಕಿಟ್ ಬ್ಯಾಗ್ ನಿಂದ ಹ್ಯಾಕ್ಸಾ ಬ್ಲೆಡ್ ಅನ್ನು ಬಳಸಿ ದೇಹವನ್ನು ಆರು ತುಂಡುಗಳಾಗಿ ಕತ್ತರಿಸಿದ್ದ. ನಂತರ ಅವುಗಳನ್ನು ತನ್ನ ಮನೆಯ 500 ಮೀಟರ್ ದೂರದ ಪ್ರದೇಶದಲ್ಲಿ ಎಸೆದಿದ್ದನು. ಸದ್ಯ ಮೃತದೇಹದ ಭಾಗಗಳಿಗಾಗಿ ಹುಡುಕಾಟ ನಡೆಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…