ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬರುವ ಬನವಾಸಿಯಲ್ಲಿ ಸಾಕಷ್ಟು ಜನರು ಜಾನುವಾರುಗಳನ್ನು ಅವಲಂಬಿಸಿ ತಮ್ಮ ಕೃಷಿ ಕಾರ್ಯಗಳಿಗೆ ದಿನನಿತ್ಯ ಹಾಲು ಮಾರಾಟ ಮಾಡುವುದು ಹಾಗೂ ಗೊಬ್ಬರ ಮುಂತಾದವುಗಳನ್ನು ಜಾನುವಾರುಗಳಿಂದ ಪಡೆದು ಬಡ ಕುಟುಂಬಗಳು ಜೀವನವನ್ನು ಸಾಗಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಶಿರಸಿಯ ಬನವಾಸಿಯಲ್ಲಿ ಸಾಕಷ್ಟು ಜಾನುವಾರುಗಳಿದ್ದು ಈ ಜಾನುವಾರುಗಳಲ್ಲಿ ಸರಿ ಸುಮಾರು 64 ಹಸುಗಳು ಚರ್ಮ ರೋಗ ಗಂಟು ರೋಗದ ಸಮಸ್ಯೆಯಿಂದ ಬಳಲುತ್ತಿದ್ದಾರೆ.ಬನವಾಸಿಯ ಬಾಗದ ಅಕ್ಕ ಪಕ್ಕದ ಹಳ್ಳಿಗಳಲ್ಲಿ ಅಂತೂ ಈ ರೋಗ ಹೇಳತೀರದಾಗಿದೆ. ಈ ರೋಗವು ಏಷ್ಟು ಭಯಾನಕವಾಗಿವೆ ಎಂದರೆ ಒಂದು ಜನುವರುವಿಗೆ ಬಂದರೆ ಮತ್ತೊಂದು ಸಮೀಪವಿರುವ ಜನುವಾರುವಿಗೆ ಕೇವಲ ಗಾಳಿಯ ಮುಖಾಂತರ ಇಲ್ಲವಾದರೆ ರೋಗ ಬಂದ ಜಾನುವಾರುವಿಗೆ ಕಚ್ಚಿದ ಸೊಳ್ಳೆ ಮತ್ತೊಂದು ಹಸುವಿಗೆ ಕಚ್ಚಿದರೆ ಆ ಹಸುವಿಗೂ ಕೂಡ ಈ ರೋಗ ಬರುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಶು ವದ್ಯರು ತಿಳಿಸಿದ್ದಾರೆ . ಈ ತಾಲೂಕಿನಲ್ಲಿ ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಪಶುಗಳಿಗೆ ಲಸಿಕೆ ಹಾಕಲಾಗಿದ್ದು ಇನ್ನೂ ಉಳಿದ ಎಲ್ಲ ಜಾನುವಾರುಗಳಿಗೂ ಲಸಿಕೆ ಹಾಕುವ ಕೆಲಸ ನಡೆಯುತ್ತಿದೆ.ಇನ್ನೂ ಮುಂದಾದರು ರೈತರ ಬೆನ್ನೆಲುಬಾದ ಜಾನುವಾರುಗಳನ್ನು ಪಶು ಸಂಗೋಪನಾ ಇಲಾಖೆ ಅಧಿಕಾರಿ ವದ್ಯರು ಎಚ್ಚೆತ್ತುಕೊಂಡು ಉಳಿದ ಜಾನುವಾರುಗಳಿಗೆ ಲಸಿಕೆ ನೀಡಿ ಜನುವಾರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗುತ್ತಾರಾ ಕಾದು ನೋಡಬೇಕಾಗಿದೆ….
ವರದಿ: ಶ್ರೀಪಾದ್ ಹೆಗಡೆ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…