ಯಾದಗಿರಿ: ನರೇಗಾ (ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಯೋಜನೆಯಡಿ ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಭಾರೀ ಅವ್ಯವಹಾರದ ಸುದ್ದಿ ಹೊರಬಿದ್ದಿದೆ. ಮಹಿಳಾ ಕಾರ್ಮಿಕರ ಹೆಸರಿನಲ್ಲಿ ಪುರುಷರು ಸೀರೆ ತೊಟ್ಟು ಕೆಲಸಕ್ಕೆ ಹಾಜರಾದಂತೆ ತೋರಿಸಿ, ಸರ್ಕಾರದ ಹಣ ಎಗರಿಸಿರುವ ಶಂಕೆ ಉಂಟಾಗಿದೆ.
ಗ್ರಾಮದ ಹತ್ತಿರದ ಪುಜಾರಿ ಎಂಬಾತನ ಹೊಲದ ಬಳಿ ನಾಲೆ ಹೂಳೆತ್ತುವ ಕಾಮಗಾರಿಗೆ ಸಂಬಂಧಿಸಿದಂತೆ ನಕಲಿ ಬಿಲ್ ತಯಾರಿಸಿ ಹಣ ವಂಚಿಸಲಾಗಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ, ನೈಜ ಕಾರ್ಮಿಕರು ಕೆಲಸಕ್ಕೆ ಹಾಜರಾಗದೇ, ಪುರುಷರು ಮಹಿಳೆಯರ ಹೆಸರಿನಲ್ಲಿ ಸೀರೆ ತೊಟ್ಟು ಫೋಟೋ ತೆಗೆಯಲ್ಪಟ್ಟಿದ್ದು, ಅದನ್ನೇ ಎನ್ಎಂಎಂಎಸ್ (ನ್ಯಾಷನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್) ಗೆ ಅಪ್ಲೋಡ್ ಮಾಡಲಾಗಿದೆ.
ಸರ್ಕಾರದ ನಿಯಮಾನುಸಾರ, ಕಾರ್ಮಿಕರ ದಿನಪತ್ರಿ ಹಾಜರಾತಿಯನ್ನು ಎನ್ಎಂಎಂಎಸ್ ಮೂಲಕ ದಾಖಲಿಸಬೇಕು. ಆದರೆ ಈ ಮೂಲಕವನ್ನೇ ದುರ್ಬಳಕೆ ಮಾಡಲಾಗಿದ್ದು, ಕೆಲ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಈ ವಂಚನೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಂಬಂಧವಾಗಿ ಪಂಚಾಯತ್ ಇಲಾಖೆ ಬಿಎಫ್ಟಿ ಅಧಿಕಾರಿ ವಿರೇಶ ಮೇಲೆ ಗಂಭೀರ ಆರೋಪಗಳು ಕೇಳಿಬಂದಿವೆ.
ಸ್ಥಳೀಯರು ಹಾಗೂ ಸಾಮಾಜಿಕ ಕಾರ್ಯಕರ್ತರು ಈ ಬಗ್ಗೆ ಆತಂಕ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಹಾಗೂ ಎಸಿಬಿಗೆ ದೂರು ನೀಡಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸಿ ಹೊತ್ತಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…