Latest

ಗಬ್ಬು ನಾರುತ್ತಿರುವ ಗ್ರಾಮ; ಕ್ಯಾರೆ ಅನ್ನದ ನಾಲಾಯಕ ಅಧಿಕಾರಿಗಳು!

ಬಿ ಬಾಗೇವಾಡಿ: ಕೊಳಚೆ ನೀರಿನ ಕೆಸರು ಗದ್ದೆಯಾದ ಅಂಬಳನೂರ ಗ್ರಾಮದ ಬಸ್ ನಿಲ್ದಾಣ ಹಾಗೂ ಶ್ರೀ ಮಾರುತೇಶ್ವರ ದೇವಾಲಯದ ಆವರಣ. ಅಂಬಳನೂರ ಗ್ರಾಮದ ಪ್ರಮುಖ ಸ್ಥಳವಾದ ಬಸ್ ನಿಲ್ದಾಣ, ಹಾಗೂ ಪಕ್ಕದಲ್ಲಿರುವ ಮಾರುತೇಶ್ವರ ದೇವಾಲಯದ ಆವರಣ ಸಂಪೂರ್ಣ ಕೊಳಚೆ ನೀರಿನಿಂದ ಆವೃತಗೊಂಡೀದೆ. ಊರಿನ ಆರಾಧ್ಯ ದೇವ ಶ್ರೀ ಮಾರುತೇಶ್ವರ ದೇವಾಸ್ಥಾನಕ್ಕೆ ಪ್ರತಿದಿನ ಗ್ರಾಮದ ಭಕ್ತಾಧಿಗಳು ಹಾಗೂ ಸಾವ೯ಜನಿಕರು ದೇವಾಲಯದ ದಶ೯ನಕ್ಕೆ ಹೋಗಬೇಕಾದರೆ ಈ ಕೊಳಚೆ ನೀರು ಮತ್ತು ಕೆಸರಿನಲ್ಲಿಯೇ ತುಳಿದಾಡಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗೋವಾ, ಬೆಂಗಳೂರು, ವಿಜಯಪುರ, ಬಸವನ ಬಾಗೇವಾಡಿ ನಗರಗಳಿಗೆ ಸಂಪರ್ಕಿಸುವ ಸುತ್ತಮುತ್ತಲಿನ ಗ್ರಾಮಗಳಿಗೆ ಕೇಂದ್ರ ಸ್ಥಳವಾಗಿದ್ದು ಇಲ್ಲಿನ ಬಸ್ ನಿಲ್ದಾಣಕ್ಕೆ ಬೇರೆ ಬೇರೆ ಗ್ರಾಮಗಳ ಜನರು ಬಂದು ಇಲ್ಲಿನ ಬಸ್ ನಿಲ್ದಾಣದ ಹತ್ತಿರ ಇರುವ ಮಾರುತೇಶ್ವರ ದೇವಾಲಯದ ಕಂಪೌಂಡ ಗೋಡೆಯ ಮೇಲೆ ತಮ್ಮ ಲಗೇಜುಗಳನ್ನು ಇಟ್ಟುಕೊಂಡು ಬಸ್ ಬರುವವರಿಗೂ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು, ಈಗ ಸುಮಾರು ತಿಂಗಳಿನಿಂದ ಈ ಸ್ಥಳದಲ್ಲಿ ಗ್ರಾಮದ ಕೆಲವು ಮನೆಗಳ ಬಟ್ಟೆ ತೊಳೆದ, ಸ್ನಾನ ಮಾಡಿದ ನೀರು ದಿನಂಪ್ರತಿ ಇಲ್ಲಿಯೇ ಬಂದು ಶೇಖರಣೆಗೊಂಡು, ಹೊಲಸು ವಾಸನೆ ಹಾಗೂ ಸೊಳ್ಳೆ, ಕ್ರಿಮಿಕೀಟಗಳ ತಾಣವಾಗಿ ಪ್ರಯಾಣಿಕರು ಹಾಗೂ ಗ್ರಾಮದ ಸಾವ೯ಜನಿಕರು ಕುಳಿತುಕೊಳ್ಳಲು, ಓಡಾಡಲು ಆಗದೆ ಹಿಡಿ ಶಾಪ ಹಾಕುತ್ತಿದರೆ.
ಊರಿನ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂದುಗಡೆ, ಸಂಪೂರ್ಣ 2-3 ಅಡಿಯಷ್ಟು ಆಳವಾಗಿ ಕೊಳಚೆ ನೀರು ಮಲ ಮೂತ್ರ ಸೇರಿ ಸಂಪೂರ್ಣ ಪ್ರದೇಶ ಗಬ್ಬೆನ್ನುತಿದೆ, ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಶಾಲೆಯಲ್ಲಿ ಕುಳಿತುಕೊಳ್ಳಲು ಆಗುತ್ತಿಲ್ಲ ಇದೆಲ್ಲದರ ಗೋಳು ಕೇಳುವವರು ಯಾರು ಇಲ್ಲದಂತಾಗಿದೆ. ಇದಕ್ಕೆ ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಅಭಿವೃದ್ಧಿಯ ಅಧಿಕಾರಿಗಳಿಗೆ ಹಲವಾರು ಬಾರಿ ಪೋನ ಮಾಡಿ ಹಾಗೂ ಅನೇಕ ಸಲ ಆಫೀಸಿಗೆ ಹೋಗಿ ವಿನಂತಿಸಿಕೊಂಡರು ಕ್ಯಾರೆ ಅನ್ನುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಇದರ ಬಗ್ಗೆ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಸಂಬಂಧಪಟ್ಟ ಮೇಲಾಧಿಕಾರಿಗಳು ಆದಷ್ಟು ಬೇಗ ಗಮನ ಹರಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರು ವಿನಂತಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago