Latest

ಗಬ್ಬು ನಾರುತ್ತಿರುವ ಗ್ರಾಮ; ಕ್ಯಾರೆ ಅನ್ನದ ನಾಲಾಯಕ ಅಧಿಕಾರಿಗಳು!

ಬಿ ಬಾಗೇವಾಡಿ: ಕೊಳಚೆ ನೀರಿನ ಕೆಸರು ಗದ್ದೆಯಾದ ಅಂಬಳನೂರ ಗ್ರಾಮದ ಬಸ್ ನಿಲ್ದಾಣ ಹಾಗೂ ಶ್ರೀ ಮಾರುತೇಶ್ವರ ದೇವಾಲಯದ ಆವರಣ. ಅಂಬಳನೂರ ಗ್ರಾಮದ ಪ್ರಮುಖ ಸ್ಥಳವಾದ ಬಸ್ ನಿಲ್ದಾಣ, ಹಾಗೂ ಪಕ್ಕದಲ್ಲಿರುವ ಮಾರುತೇಶ್ವರ ದೇವಾಲಯದ ಆವರಣ ಸಂಪೂರ್ಣ ಕೊಳಚೆ ನೀರಿನಿಂದ ಆವೃತಗೊಂಡೀದೆ. ಊರಿನ ಆರಾಧ್ಯ ದೇವ ಶ್ರೀ ಮಾರುತೇಶ್ವರ ದೇವಾಸ್ಥಾನಕ್ಕೆ ಪ್ರತಿದಿನ ಗ್ರಾಮದ ಭಕ್ತಾಧಿಗಳು ಹಾಗೂ ಸಾವ೯ಜನಿಕರು ದೇವಾಲಯದ ದಶ೯ನಕ್ಕೆ ಹೋಗಬೇಕಾದರೆ ಈ ಕೊಳಚೆ ನೀರು ಮತ್ತು ಕೆಸರಿನಲ್ಲಿಯೇ ತುಳಿದಾಡಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗೋವಾ, ಬೆಂಗಳೂರು, ವಿಜಯಪುರ, ಬಸವನ ಬಾಗೇವಾಡಿ ನಗರಗಳಿಗೆ ಸಂಪರ್ಕಿಸುವ ಸುತ್ತಮುತ್ತಲಿನ ಗ್ರಾಮಗಳಿಗೆ ಕೇಂದ್ರ ಸ್ಥಳವಾಗಿದ್ದು ಇಲ್ಲಿನ ಬಸ್ ನಿಲ್ದಾಣಕ್ಕೆ ಬೇರೆ ಬೇರೆ ಗ್ರಾಮಗಳ ಜನರು ಬಂದು ಇಲ್ಲಿನ ಬಸ್ ನಿಲ್ದಾಣದ ಹತ್ತಿರ ಇರುವ ಮಾರುತೇಶ್ವರ ದೇವಾಲಯದ ಕಂಪೌಂಡ ಗೋಡೆಯ ಮೇಲೆ ತಮ್ಮ ಲಗೇಜುಗಳನ್ನು ಇಟ್ಟುಕೊಂಡು ಬಸ್ ಬರುವವರಿಗೂ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು, ಈಗ ಸುಮಾರು ತಿಂಗಳಿನಿಂದ ಈ ಸ್ಥಳದಲ್ಲಿ ಗ್ರಾಮದ ಕೆಲವು ಮನೆಗಳ ಬಟ್ಟೆ ತೊಳೆದ, ಸ್ನಾನ ಮಾಡಿದ ನೀರು ದಿನಂಪ್ರತಿ ಇಲ್ಲಿಯೇ ಬಂದು ಶೇಖರಣೆಗೊಂಡು, ಹೊಲಸು ವಾಸನೆ ಹಾಗೂ ಸೊಳ್ಳೆ, ಕ್ರಿಮಿಕೀಟಗಳ ತಾಣವಾಗಿ ಪ್ರಯಾಣಿಕರು ಹಾಗೂ ಗ್ರಾಮದ ಸಾವ೯ಜನಿಕರು ಕುಳಿತುಕೊಳ್ಳಲು, ಓಡಾಡಲು ಆಗದೆ ಹಿಡಿ ಶಾಪ ಹಾಕುತ್ತಿದರೆ.
ಊರಿನ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂದುಗಡೆ, ಸಂಪೂರ್ಣ 2-3 ಅಡಿಯಷ್ಟು ಆಳವಾಗಿ ಕೊಳಚೆ ನೀರು ಮಲ ಮೂತ್ರ ಸೇರಿ ಸಂಪೂರ್ಣ ಪ್ರದೇಶ ಗಬ್ಬೆನ್ನುತಿದೆ, ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಶಾಲೆಯಲ್ಲಿ ಕುಳಿತುಕೊಳ್ಳಲು ಆಗುತ್ತಿಲ್ಲ ಇದೆಲ್ಲದರ ಗೋಳು ಕೇಳುವವರು ಯಾರು ಇಲ್ಲದಂತಾಗಿದೆ. ಇದಕ್ಕೆ ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಅಭಿವೃದ್ಧಿಯ ಅಧಿಕಾರಿಗಳಿಗೆ ಹಲವಾರು ಬಾರಿ ಪೋನ ಮಾಡಿ ಹಾಗೂ ಅನೇಕ ಸಲ ಆಫೀಸಿಗೆ ಹೋಗಿ ವಿನಂತಿಸಿಕೊಂಡರು ಕ್ಯಾರೆ ಅನ್ನುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಇದರ ಬಗ್ಗೆ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಸಂಬಂಧಪಟ್ಟ ಮೇಲಾಧಿಕಾರಿಗಳು ಆದಷ್ಟು ಬೇಗ ಗಮನ ಹರಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರು ವಿನಂತಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago