Latest

ಗಬ್ಬು ನಾರುತ್ತಿರುವ ಗ್ರಾಮ; ಕ್ಯಾರೆ ಅನ್ನದ ನಾಲಾಯಕ ಅಧಿಕಾರಿಗಳು!

ಬಿ ಬಾಗೇವಾಡಿ: ಕೊಳಚೆ ನೀರಿನ ಕೆಸರು ಗದ್ದೆಯಾದ ಅಂಬಳನೂರ ಗ್ರಾಮದ ಬಸ್ ನಿಲ್ದಾಣ ಹಾಗೂ ಶ್ರೀ ಮಾರುತೇಶ್ವರ ದೇವಾಲಯದ ಆವರಣ. ಅಂಬಳನೂರ ಗ್ರಾಮದ ಪ್ರಮುಖ ಸ್ಥಳವಾದ ಬಸ್ ನಿಲ್ದಾಣ, ಹಾಗೂ ಪಕ್ಕದಲ್ಲಿರುವ ಮಾರುತೇಶ್ವರ ದೇವಾಲಯದ ಆವರಣ ಸಂಪೂರ್ಣ ಕೊಳಚೆ ನೀರಿನಿಂದ ಆವೃತಗೊಂಡೀದೆ. ಊರಿನ ಆರಾಧ್ಯ ದೇವ ಶ್ರೀ ಮಾರುತೇಶ್ವರ ದೇವಾಸ್ಥಾನಕ್ಕೆ ಪ್ರತಿದಿನ ಗ್ರಾಮದ ಭಕ್ತಾಧಿಗಳು ಹಾಗೂ ಸಾವ೯ಜನಿಕರು ದೇವಾಲಯದ ದಶ೯ನಕ್ಕೆ ಹೋಗಬೇಕಾದರೆ ಈ ಕೊಳಚೆ ನೀರು ಮತ್ತು ಕೆಸರಿನಲ್ಲಿಯೇ ತುಳಿದಾಡಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗೋವಾ, ಬೆಂಗಳೂರು, ವಿಜಯಪುರ, ಬಸವನ ಬಾಗೇವಾಡಿ ನಗರಗಳಿಗೆ ಸಂಪರ್ಕಿಸುವ ಸುತ್ತಮುತ್ತಲಿನ ಗ್ರಾಮಗಳಿಗೆ ಕೇಂದ್ರ ಸ್ಥಳವಾಗಿದ್ದು ಇಲ್ಲಿನ ಬಸ್ ನಿಲ್ದಾಣಕ್ಕೆ ಬೇರೆ ಬೇರೆ ಗ್ರಾಮಗಳ ಜನರು ಬಂದು ಇಲ್ಲಿನ ಬಸ್ ನಿಲ್ದಾಣದ ಹತ್ತಿರ ಇರುವ ಮಾರುತೇಶ್ವರ ದೇವಾಲಯದ ಕಂಪೌಂಡ ಗೋಡೆಯ ಮೇಲೆ ತಮ್ಮ ಲಗೇಜುಗಳನ್ನು ಇಟ್ಟುಕೊಂಡು ಬಸ್ ಬರುವವರಿಗೂ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು, ಈಗ ಸುಮಾರು ತಿಂಗಳಿನಿಂದ ಈ ಸ್ಥಳದಲ್ಲಿ ಗ್ರಾಮದ ಕೆಲವು ಮನೆಗಳ ಬಟ್ಟೆ ತೊಳೆದ, ಸ್ನಾನ ಮಾಡಿದ ನೀರು ದಿನಂಪ್ರತಿ ಇಲ್ಲಿಯೇ ಬಂದು ಶೇಖರಣೆಗೊಂಡು, ಹೊಲಸು ವಾಸನೆ ಹಾಗೂ ಸೊಳ್ಳೆ, ಕ್ರಿಮಿಕೀಟಗಳ ತಾಣವಾಗಿ ಪ್ರಯಾಣಿಕರು ಹಾಗೂ ಗ್ರಾಮದ ಸಾವ೯ಜನಿಕರು ಕುಳಿತುಕೊಳ್ಳಲು, ಓಡಾಡಲು ಆಗದೆ ಹಿಡಿ ಶಾಪ ಹಾಕುತ್ತಿದರೆ.
ಊರಿನ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂದುಗಡೆ, ಸಂಪೂರ್ಣ 2-3 ಅಡಿಯಷ್ಟು ಆಳವಾಗಿ ಕೊಳಚೆ ನೀರು ಮಲ ಮೂತ್ರ ಸೇರಿ ಸಂಪೂರ್ಣ ಪ್ರದೇಶ ಗಬ್ಬೆನ್ನುತಿದೆ, ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಶಾಲೆಯಲ್ಲಿ ಕುಳಿತುಕೊಳ್ಳಲು ಆಗುತ್ತಿಲ್ಲ ಇದೆಲ್ಲದರ ಗೋಳು ಕೇಳುವವರು ಯಾರು ಇಲ್ಲದಂತಾಗಿದೆ. ಇದಕ್ಕೆ ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಅಭಿವೃದ್ಧಿಯ ಅಧಿಕಾರಿಗಳಿಗೆ ಹಲವಾರು ಬಾರಿ ಪೋನ ಮಾಡಿ ಹಾಗೂ ಅನೇಕ ಸಲ ಆಫೀಸಿಗೆ ಹೋಗಿ ವಿನಂತಿಸಿಕೊಂಡರು ಕ್ಯಾರೆ ಅನ್ನುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಇದರ ಬಗ್ಗೆ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಸಂಬಂಧಪಟ್ಟ ಮೇಲಾಧಿಕಾರಿಗಳು ಆದಷ್ಟು ಬೇಗ ಗಮನ ಹರಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರು ವಿನಂತಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

3 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

3 hours ago

WFH ಕೇಳಿದ ಮಹಿಳೆಗೆ HR ಶಾಕ್: ‘ಸಿಇಒ ಮನೋಭಾವ ಬೇಕು’ ಹೇಳಿ ಕರೆ ಕಟ್!

ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…

3 hours ago

ನಕಲಿ ದಾಖಲೆಗಳಿಂದ 9 ಎಕರೆ ಸರ್ಕಾರಿ ಜಮೀನು ಹಗರಣ: ನಿವೃತ್ತ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…

3 hours ago

₹300 ಲಂಚಕ್ಕೆ ‘ಪರೀಕ್ಷೆ ಮಾರಾಟ’: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ, ಶಿಕ್ಷಣ ವ್ಯವಸ್ಥೆಗೆ ಕಳಂಕ

ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…

3 hours ago

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

19 hours ago