ಶಿಕ್ಷಕಿಯೊಂದಿಗೆ ಪ್ರೇಮ ವೈಫಲ್ಯದಿಂದ ಮನನೊಂದ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಅಂಬತ್ತೂರಿನಲ್ಲಿ ಜರುಗಿದೆ.
ಹನ್ನೆರಡನೇ ತರಗತಿ ಮುಗಿಸಿ ವಿದ್ಯಾರ್ಥಿಯು ಕಾಲೇಜು ಪ್ರವೇಶ ಕೌನ್ಸೆಲಿಂಗ್ಗೆ ತೆರಳಿ ಮನೆಗೆ ವಾಪಸ್ ಬಂದಿದ್ದರು. ಆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಕಂಡ ಪೋಷಕರು ಆತನನ್ನು ರಕ್ಷಿಸಿ ಅಂಬತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗಮಧ್ಯೆದಲ್ಲೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾರೆ.
ವಿದ್ಯಾರ್ಥಿಯ ಸಾವಿನ ಬಗ್ಗೆ ಅನುಮಾನಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ನಂತರ ವಿದ್ಯಾರ್ಥಿಯ ಪೋಷಕರು ನೀಡಿದ ದೂರಿನ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರು, ವಿದ್ಯಾರ್ಥಿಯ ಮೊಬೈಲ್ ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ಹಲವು ಬೆಚ್ಚಿ ಬೀಳಿಸುವ ಸಂಗತಿಗಳು ಹೊರಬಿದ್ದಿವೆ.
ವಿದ್ಯಾರ್ಥಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾಗ ಅದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿ ಶರ್ಮಿಳಾ ಎಂಬುವವರು ಪರಿಚಯವಾಗಿತ್ತು. ಆ ಶಿಕ್ಷಕಿ ನಡೆಸುತ್ತಿದ್ದ ಟ್ಯೂಷನ್ಗೂ ವಿದ್ಯಾರ್ಥಿ ಸೇರಿಕೊಂಡಿದ್ದರು. ನಂತರ ಇವರಿಬ್ಬರ ಪರಿಚಯ ಸ್ನೇಹ ಮತ್ತು ಪ್ರೇಮಕ್ಕೆ ತಿರುಗಿತ್ತು. ಆದರೆ, ಈ ನಡುವೆ ಶಿಕ್ಷಕಿಗೆ ಕುಟುಂಬಸ್ಥರು ಮದುವೆ ನಿಶ್ಚಯ ಮಾಡಿದ್ದರಿಂದ ಶಿಕ್ಷಕಿಯು ವಿದ್ಯಾರ್ಥಿಯೊಂದಿಗಿನ ಎಲ್ಲ ಸಂಪರ್ಕವನ್ನು ಕಡಿತಗೊಳಿಸಿದ್ದರು.
ವಿದ್ಯಾರ್ಥಿಯು ಪದೇ ಪದೇ ಶಿಕ್ಷಕಿಯನ್ನು ತನ್ನೊಂದಿಗೆ ಮಾತನಾಡಲು ಒತ್ತಾಯಿಸಿದ್ದರು. ಆದರೆ, ಶಿಕ್ಷಕಿ ಮಾತನಾಡುತ್ತಿರಲಿಲ್ಲ. ಇದರಿಂದ ಮನನೊಂದ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಶಿಕ್ಷಕಿ ಶರ್ಮಿಳಾ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…