Latest

ರಾಜ್ಯ ಮಟ್ಟದ ಖೋಖೋ ಸ್ಪರ್ದೆಗೆ ಆಯ್ಕೆಯಾದ ವಿದ್ಯಾರ್ಥಿನಿ

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾದ ಪ್ರಿಯಾ ಮೂಡಪುಜಿ ಖೋಖೋ ಸ್ಪರ್ದೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಈ ಮೊದಲು ಖೋಖೋ ಸ್ಪರ್ದೆಯಲ್ಲಿ ಭಾಗವಹಿಸಿ ವಲಯ ಮತ್ತು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಈ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದರು. ನಂತರ ವಿಭಾಗದ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಈ ಎಲ್ಲಾ ಪಂದ್ಯಗಳಲ್ಲಿ ಉತ್ತಮವಾಗಿ ಚತುರತೆಯಿಂದ ಆಟವಾಡಿ ಎಲ್ಲರ ಮನಗೆದ್ದ ವಿದ್ಯಾರ್ಥಿನಿ ಪ್ರಿಯಾ ಮೂಡಪುಜಿ ಇದೀಗ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈ ಪುಟ್ಟ ವಿದ್ಯಾರ್ಥಿನಿ ರಾಜ್ಯ ಮಟ್ಟದ ಖೋಖೋ ಸ್ಪರ್ದೆಗೆ ಆಯ್ಕೆಯಾಗಿದ್ದಕ್ಕೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಕುಟುಂಬದವರು, ಸಂಬಂಧಿಕರು, ಹಾಗೂ ಗ್ರಾಮದ ಸಮಸ್ತರು ಸಂತಸ ವ್ಯಕ್ತಪಡಿಸಿದ್ದಾರೆ. ಹಾಗೂ ರಾಜ್ಯ ಮಟ್ಟದಲ್ಲಿ ಸ್ಪರ್ದೆಯನ್ನು ಗೆದ್ದು ಗ್ರಾಮಕ್ಕೆ ಹಾಗೂ ಜಿಲ್ಲೆಗೆ ಒಳ್ಳೆಯ ಹೆಸರು ತರಲಿ ಎಂದು ಶುಭ ಹಾರೈಸಿದ್ದಾರೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

3 hours ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

3 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

22 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago