ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಗದ್ದೆಯಲ್ಲಿ ಬೋರ್ ವೆಲ್ ಪ್ರಾರಂಭ ಮಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಮುಂಡಗೋಡದ ತಾಲೂಕ ಆಸ್ಪತ್ರೆಗೆ ಸಾಗಿಸಲಾಗಿದೆ ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತಪಟ್ಟ ಘಟನೆ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಜಿನೇಂದ್ರ ಪಾರ್ಶ್ವನಾಥ ಬಸ್ತವಾಡ (18)ಎಂಬ ಯುವಕನೇ ದಾರುಣವಾಗಿ ಸಾವು ಕಂಡಿದ್ದಾನೆ.
ಇನ್ನೂ ಮೃತ ಯುವಕನ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ ಆತನ ಕುಟುಂಬದವರು ಶಿರಸಿಯ ನೇತ್ರ ಭಂಡಾರವನ್ನು ಸಂಪರ್ಕಿಸಿದ್ದಾರೆ ಆಗ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಶಿರಸಿಯ ಲಯನ್ಸ್ ನೇತ್ರ ಭಂಡಾರದವರು ಯುವಕನ ಎರಡು ಕಣ್ಣುಗಳನ್ನು ಸುರಕ್ಷಿತವಾಗಿ ಪಡೆದುಕೊಂಡು ಹೋಗಿದ್ದಾರೆ ಇದರಿಂದ ಯುವಕನು ಸಾವಿನಲ್ಲೂ ಸಾರ್ಥಕತೆ ಮೆರೆದು ಮತ್ತಿಬ್ಬರ ಬಾಳಿಗೆ ಬೆಳಕಾಗಲಿದ್ದಾನೆ.
ಯುವಕನ ಕುಟುಂಬದವರ ಕಾರ್ಯಕ್ಕೆ ತಾಲೂಕಿನಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ.
ವರದಿ: ಮಂಜುನಾಥ ಹರಿಜನ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…