Latest

ಬಿಜೆಪಿ ಮಾಜಿ ಸಚಿವರ ಕಾರನ್ನು ತಡೆದು ಹಳೆ ಬಾಕಿ ಕೊಡಲು ಒತ್ತಾಯಿಸಿದ ಟೀ ವ್ಯಾಪಾರಿ!

ಮಧ್ಯ ಪ್ರದೇಶದ ಶಾಸಕ ಹಾಗೂ ಮಾಜಿ ಸಚಿವರೊಬ್ಬರು ಟೀ ಮಾರಾಟಗಾರನಿಂದ ಮುಜುಗರ ಅನುಭವಿಸಿದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಜೆಪಿ ಶಾಸಕ ಕರಣ್​ ಸಿಂಗ್​ ವರ್ಮಾ ಅವರು ಸಿಹೋರ್​ ಜಿಲ್ಲೆಯ ಇಚವಾರ್​ ಪ್ರದೇಶದಲ್ಲಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿ, ಕಾರು ತಡೆದ ಟೀ ಮಾರಾಟಗಾರ 2018ರಿಂದ ಬಾಕಿ ಉಳಿಸಿಕೊಂಡಿದ್ದ ಟೀ ಕುಡಿದ ಹಣವನ್ನು ತಕ್ಷಣ ಪಾವತಿಸುವಂತೆ ಪಟ್ಟು ಹಿಡಿದನು.
ಚುನಾವಣೆ ಸಮೀಪಿಸುತ್ತಿದ್ದಂತೆ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿದ್ದು, ತಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಶಾಸಕ ಕರಣ್ ಸಿಂಗ್ ವರ್ಮಾ ಕೂಡ ತಮ್ಮ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಈ ವೇಳೆ ಟೀ ವ್ಯಾಪಾರಿಯೊಬ್ಬರು ಶಾಸಕರನ್ನು ತಡೆದರು. ಬಾಕಿ ಮೊತ್ತವನ್ನು ಕೊಡುವಂತೆ ಒತ್ತಾಯಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
2018ರ ವಿಧಾನಸಭಾ ಚುನಾವಣೆಯ ನಂತರ ಕರಣ್ ಸಿಂಗ್ ವರ್ಮಾ ಟೀ ಮಾರಾಟಗಾರನಿಗೆ ನೀಡಬೇಕಾದ ಹಣ ಇದುವರೆಗೂ ಪಾವತಿಯಾಗಿಲ್ಲ ಎಂಬುದು ಬೆಳಕಿಗೆ ಬಂದಿದೆ. ಮಾಜಿ ಸಚಿವರೂ ಇಷ್ಟು ಸಾಲ ಮಾಡಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…

9 hours ago

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

19 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

19 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

1 day ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

1 day ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

1 day ago