Latest

ಪ್ರತಿಭಟನೆಗೆಂದು ಫ್ರೀಡಂ ಪಾರ್ಕ್ ಗೆ ಬಂದ ಶಿಕ್ಷಕ ಅನುದಾನಿತ ಶಿಕ್ಷಕರಿಗೆ ಪಿಂಚಣಿ ನೀಡುವಂತೆ ಮನವಿ ಬರೆದು ಆತ್ಮಹತ್ಯೆ.

ಪ್ರತಿಭಟನೆಗೆ ಬಂದಿದ್ದ ಶಂಕರಪ್ಪ ಬೋರಡ್ಡಿ(47) ಎಂಬ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿನ್ನೆ(ಫೆ.22) ರಾತ್ರಿ ನಡೆದಿದೆ. ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ಪಿಂಚನಿಗಾಗಿ ನಡೆಯುತ್ತಿರುವ ಅನಿರ್ದಿಷ್ಟವಧಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕ ಶಂಕರಪ್ಪ ಬೆಂಗಳೂರಿಗೆ ಆಗಮಿಸಿದ್ದರು. ಆದ್ರೆ ಪ್ರತಿಭಟನೆಯಲ್ಲಿ ಭಾಗಿಯಾಗಿ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಶಂಕರಪ್ಪ ರಾಯಚೂರು ಜಿಲ್ಲೆಯ ಸಿಂಧನೂರು ಮೂಲದವರು. ಪಟ್ಟಣದಲ್ಲಿ ಗಣಿತ ಶಿಕ್ಷಕರಾಗಿದ್ದರು. ಮಂಗಳವಾರ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಂಕರಪ್ಪ ಪ್ರತಿಭಟನೆ ಬಳಿಕ ಶಿಕ್ಷಕರ ಸದನದಲ್ಲಿ ತಂಗಿದ್ದರು. ಬಳಿಕ ರೂಂನಲ್ಲೆ ಬ್ಯಾಗ್ ಇಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಬಳಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಶಿಕ್ಷಕ ಶಂಕರಪ್ಪ ಬೋರಡ್ಡಿ ಮೃತದೇಹ ಊರಿಗೆ ರವಾನಿಸಲಾಗುತ್ತಿದೆ. ಶಂಕರಪ್ಪ, ಇದೇ ಫೆಬ್ರವರಿ 20 ರಂದು ಶಾಲೆ ಮುಗಿಸಿಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದರು. ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಡ್ಯ ಮೂಲದ ಬೆಂಗಳೂರಿನಲ್ಲಿರುವ ನಂದಿನಿ ಎನ್ನುವ ಮಹಿಳೆಗೆ 27 ಲಕ್ಷ ಹಣ ನೀಡಿದ್ದರ ಬಗ್ಗೆ ಉಲ್ಲೇಖಿಸಿದ್ದಾರೆ. ಶಂಕರಪ್ಪ, ಸಾಲ ಮಾಡಿ ಮಹಿಳೆಗೆ ಹಣ ನೀಡಿದ್ದ. ಜೊತೆಗೆ ಅನುದಾನಿತ ಶಿಕ್ಷಕರ ಸಮಸ್ಯೆ ಬಗ್ಗೆಯೂ ಉಲ್ಲೇಖಿಸಿದ್ದರು. ಅನುದಾನಿತ ಶಿಕ್ಷಕರಿಗೆ ಪಿಂಚಣಿ ನೀಡುವಂತೆ ಮನವಿ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

57 minutes ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

58 minutes ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

60 minutes ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

1 hour ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

1 hour ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

1 hour ago