Latest

ಪ್ರತಿಭಟನೆಗೆಂದು ಫ್ರೀಡಂ ಪಾರ್ಕ್ ಗೆ ಬಂದ ಶಿಕ್ಷಕ ಅನುದಾನಿತ ಶಿಕ್ಷಕರಿಗೆ ಪಿಂಚಣಿ ನೀಡುವಂತೆ ಮನವಿ ಬರೆದು ಆತ್ಮಹತ್ಯೆ.

ಪ್ರತಿಭಟನೆಗೆ ಬಂದಿದ್ದ ಶಂಕರಪ್ಪ ಬೋರಡ್ಡಿ(47) ಎಂಬ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿನ್ನೆ(ಫೆ.22) ರಾತ್ರಿ ನಡೆದಿದೆ. ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ಪಿಂಚನಿಗಾಗಿ ನಡೆಯುತ್ತಿರುವ ಅನಿರ್ದಿಷ್ಟವಧಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕ ಶಂಕರಪ್ಪ ಬೆಂಗಳೂರಿಗೆ ಆಗಮಿಸಿದ್ದರು. ಆದ್ರೆ ಪ್ರತಿಭಟನೆಯಲ್ಲಿ ಭಾಗಿಯಾಗಿ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಶಂಕರಪ್ಪ ರಾಯಚೂರು ಜಿಲ್ಲೆಯ ಸಿಂಧನೂರು ಮೂಲದವರು. ಪಟ್ಟಣದಲ್ಲಿ ಗಣಿತ ಶಿಕ್ಷಕರಾಗಿದ್ದರು. ಮಂಗಳವಾರ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಂಕರಪ್ಪ ಪ್ರತಿಭಟನೆ ಬಳಿಕ ಶಿಕ್ಷಕರ ಸದನದಲ್ಲಿ ತಂಗಿದ್ದರು. ಬಳಿಕ ರೂಂನಲ್ಲೆ ಬ್ಯಾಗ್ ಇಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಬಳಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಶಿಕ್ಷಕ ಶಂಕರಪ್ಪ ಬೋರಡ್ಡಿ ಮೃತದೇಹ ಊರಿಗೆ ರವಾನಿಸಲಾಗುತ್ತಿದೆ. ಶಂಕರಪ್ಪ, ಇದೇ ಫೆಬ್ರವರಿ 20 ರಂದು ಶಾಲೆ ಮುಗಿಸಿಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದರು. ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಡ್ಯ ಮೂಲದ ಬೆಂಗಳೂರಿನಲ್ಲಿರುವ ನಂದಿನಿ ಎನ್ನುವ ಮಹಿಳೆಗೆ 27 ಲಕ್ಷ ಹಣ ನೀಡಿದ್ದರ ಬಗ್ಗೆ ಉಲ್ಲೇಖಿಸಿದ್ದಾರೆ. ಶಂಕರಪ್ಪ, ಸಾಲ ಮಾಡಿ ಮಹಿಳೆಗೆ ಹಣ ನೀಡಿದ್ದ. ಜೊತೆಗೆ ಅನುದಾನಿತ ಶಿಕ್ಷಕರ ಸಮಸ್ಯೆ ಬಗ್ಗೆಯೂ ಉಲ್ಲೇಖಿಸಿದ್ದರು. ಅನುದಾನಿತ ಶಿಕ್ಷಕರಿಗೆ ಪಿಂಚಣಿ ನೀಡುವಂತೆ ಮನವಿ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago