Latest

ಸರ್ಕಾರದ ಭ್ರಷ್ಟಾಚಾರವನ್ನು ಎತ್ತಿ ಹಿಡಿದ ಶಿಕ್ಷಕ.

ಈ ಘಟನೆ ನಡೆದಿರುವುದು ಶಿಕ್ಷಣ ಸಚಿವರ ತವರಿನಲ್ಲಿ. ಇವನು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಅಷ್ಟೇ ಅಲ್ಲಾ, ಈತನ ವಾಟ್ಸಪ್ ನಲ್ಲಿ ಶಿರಾ ತಾಲೂಕಿನ ಶಿಕ್ಷಕಿ ಒಬ್ಬರು ನೀಡಿದ ಮಾನಸಿಕ ಕಿರುಕುಳದ ದೂರಿಗೆ ಸಂಬಂಧಿಸಿದಂತೆ, ಏನೂ ಕ್ರಮ ಕೈಗೊಳ್ಳದೆ, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮುಚ್ಚಿ ಹಾಕಿದ್ದಾರೆ,ಎಂಬ ಸಂದೇಶವನ್ನು ಹಾಕಿಕೊಂಡು ಸರ್ಕಾರದ 40% ಭ್ರಷ್ಟಾಚಾರವನ್ನು ಪರೋಕ್ಷವಾಗಿ ಎತ್ತಿ ಹಿಡಿದಿದ್ದಾನೆ.
ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿರಾ ತಾಲೂಕಿನ, ಮಾರನಗೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ. ಈತನ ಹೆಸರು ಬಿ ಅರ್ ಹನುಮಂತರಾಜು. ಈತನು ತನ್ನ ವಾಟ್ಸಪ್ ನ್ನಲಿ ಕಳೆದ ಭಾನುವಾರ ಮಧ್ಯಾಹ್ನ ಎರಡು ಗಂಟೆಗೆ ಒಂದು ಸ್ಟೇಟಸ್ ಹಾಕಿಕೊಳ್ಳುತ್ತಾನೆ. ಅದರ ಸಾರಾಂಶ ಇಂತಿದೆ. ಈ ಹಿಂದೆ ಪರಿಶಿಷ್ಟ ಪಂಗಡದ ,ಸಿರಾ ತಾಲೂಕಿನ ಶಿಕ್ಷಕಿಯೊಬ್ಬರಿಗೆ ಜಾತಿ ನಿಂದನೆ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಬಿಇಓ ಮತ್ತು ಡಿಡಿಪಿಐಗೆ ಹಿಂದಿನ ಸಿ ಆರ್ ಪಿ ವಿರುದ್ದ ದೂರನ್ನು ಸಲ್ಲಿಸಿದ್ದರು. ಆಗಿನ ಡಿಡಿಪಿಐ ಏನು ಕ್ರಮ ಕೈಗೊಳ್ಳದೆ ಕೇಸನ್ನು ಮುಚ್ಚಿಹಾಕಿರುತ್ತಾರೆ ಎಂಬುದಾಗಿದೆ.

ಈ ಸ್ಟೇಟಸ್ ಅನ್ನು ಗಮನಿಸಿದಾಗ, ಒಬ್ಬ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಸರ್ಕಾರದ ವಿರುದ್ಧ ಬಹಿರಂಗವಾಗಿ ಭ್ರಷ್ಟಾಚಾರದ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿರುತ್ತಾನೆ. ಹಾಗಾದರೆ ಒಬ್ಬ ಜವಾಬ್ದಾರಿ ಹುದ್ದೆಯಲ್ಲಿ ಇದ್ದುಕೊಂಡು , ತನ್ನದೇ ಇಲಾಖೆಯ ಮೇಲಾಧಿಕಾರಿಗೆ, ತುಂಬಾ ಗಂಭೀರವಾದ ಪ್ರಕರಣವನ್ನು ಏನು ಕ್ರಮ ಕೈಗೊಳ್ಳದೆ ,ಮುಚ್ಚಿ ಹಾಕಿದ್ದಾರೆ ಎಂದರೆ, ಎಷ್ಟು ಹಣ ನುಂಗಿರಬಹುದು ಎಂಬುದು ಕಾಡದೆ ಇರಲಾರದು.
ಇನ್ನೂ ಇದೇ ತರಹ ಅನೇಕ ಪ್ರಕರಣಗಳು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭ್ರಷ್ಟಾಚಾರ ಮಾಡಿದ್ದಾರೆ ಎಂಬುದು ದೃಢವಾದಂತಾಗಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾದಂತಹ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಚೇರಿ ಸೂಚನೆ ಮೇರೆಗೆ ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ತನಿಖೆ ನಡೆಸಿ ಶಿಕ್ಷಕಿಯ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆದಿರುವುದಿಲ್ಲ ಎಂದು ವರದಿಯನ್ನು ನೀಡಿರುತ್ತದೆ.
ಈ ರೀತಿ ವರದಿಯನ್ನು ನೀಡಿದ ನಂತರವೂ ಶಿಕ್ಷಕನೊಬ್ಬ ತನ್ನ ಮೇಲಾಧಿಕಾರಿ ಸರಿಯಾದ ರೀತಿಯಲ್ಲಿ ತನಿಖೆ ನಡೆಸಿಲ್ಲ ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ ಎಂದು ಹೇಳುತ್ತಿದ್ದಾನೆ, ಎಂದರೆ ನಿಜಕ್ಕೂ ಇದು ಈ ರೀತಿ ನಡೆದಿದೆಯಾ? ನಮ್ಮ ರಾಜ್ಯ ಸರ್ಕಾರವನ್ನು 40% ಸರ್ಕಾರ ಎಂದು ಜನರು ಸರ್ಕಾರಕ್ಕೆ ಟೀಕಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಒಬ್ಬ ಶಿಕ್ಷಕ ಶಿಕ್ಷಣ ಇಲಾಖೆಯ ಭ್ರಷ್ಟಾಚಾರ-ಅವ್ಯವಸ್ಥೆಯ ಬಗ್ಗೆ ಧ್ವನಿ ಎತ್ತಿದ್ದಾನೆ ಎಂದರೆ, ಎಷ್ಟರ ಮಟ್ಟಿಗೆ ಸರ್ಕಾರ ಆವ್ಯವಸ್ಥೆ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರಬೇಕು.
ಪೋಲಿಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆ ನೀಡಿರುವ ವರದಿಗಳು ಸುಳ್ಳಾ? ಅಥವಾ ಶಿಕ್ಷಕನೇ ಸರ್ಕಾರದ ವಿರುದ್ಧ ಸಂಘಗಳನ್ನು ಎತ್ತಿ ಕಟ್ಟಲು ಮುಂದಾಗಿದ್ದಾನಾ?

ಸರ್ಕಾರಿ ನೌಕರರು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ, ಯಾವುದೇ ರೀತಿಯ ಮಾಹಿತಿಗಳನ್ನು ಹಾಕುವುದು ಅಪರಾಧ ಎಂದು ಆದೇಶವಿದೆ.  ಹೀಗಿದ್ದ ಮೇಲೆ ಈ ಶಿಕ್ಷಕ ಹಾಕಿರುವುದು ಸುಳ್ಳು ಎಂದಾದರೆ, ಆತನ ವಿರುದ್ಧ ಶಿಕ್ಷೆ ಆಗಬೇಕಿತ್ತು ,ಇಲ್ಲಿಯವರೆಗೂ ಆ ರೀತಿಯ ಯಾವುದೇ ಘಟನೆಗಳು ನಡೆದಿಲ್ಲವೆಂದ ಮೇಲೆ, ಸರಿಯಾದ ರೀತಿಯಲ್ಲಿ ತನಿಖೆಯಾಗಿಲ್ಲ, ಹಣ ತೆಗೆದುಕೊಂಡು ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ. ಮಾನ್ಯ ಶಿಕ್ಷಣ ಸಚಿವರೇ ತಮ್ಮದು ಭ್ರಷ್ಟಾಚಾರದ ಸರ್ಕಾರವೆಂದು ಒಪ್ಪಿಕೊಳ್ಳಿ. ನಿಮ್ಮದೇ ಇಲಾಖೆಯ ಶಿಕ್ಷಕನ ಆರೋಪ ಸತ್ಯವೆಂದು ಒಪ್ಪಿಕೊಳ್ಳಿ……

ಭ್ರಷ್ಟರ ಬೇಟೆ

Recent Posts

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

11 hours ago

ಖಾಸಗಿ ವಿಡಿಯೋ ಬೆದರಿಕೆ, ಕೋಟಿ ರೂ. ಬೇಡಿಕೆ: ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್…

11 hours ago

ಆಂಬ್ಯುಲೆನ್ಸ್‌ನಲ್ಲೇ ರೋಮ್ಯಾನ್ಸ್: 5 ಕಿಮೀ ಬೆನ್ನಟ್ಟಿದ ಸಾರ್ವಜನಿಕರು, ವಿಡಿಯೋ ವೈರಲ್

ಛತ್ತರ್‌ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನೊಳಗೆ ಯುವತಿ ಹಾಗೂ ಇಬ್ಬರು…

12 hours ago

ವಿಚ್ಛೇದಿತ ಐಐಟಿ ವರನ ವಿವಾದಾತ್ಮಕ ಬೇಡಿಕೆ: ‘ವರ್ಜಿನ್ ಬ್ರಾಹ್ಮಣ ವಧು ಬೇಕು’ ಹೇಳಿಕೆಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…

16 hours ago

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

21 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

21 hours ago