ಈ ಘಟನೆ ನಡೆದಿರುವುದು ಶಿಕ್ಷಣ ಸಚಿವರ ತವರಿನಲ್ಲಿ. ಇವನು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಅಷ್ಟೇ ಅಲ್ಲಾ, ಈತನ ವಾಟ್ಸಪ್ ನಲ್ಲಿ ಶಿರಾ ತಾಲೂಕಿನ ಶಿಕ್ಷಕಿ ಒಬ್ಬರು ನೀಡಿದ ಮಾನಸಿಕ ಕಿರುಕುಳದ ದೂರಿಗೆ ಸಂಬಂಧಿಸಿದಂತೆ, ಏನೂ ಕ್ರಮ ಕೈಗೊಳ್ಳದೆ, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮುಚ್ಚಿ ಹಾಕಿದ್ದಾರೆ,ಎಂಬ ಸಂದೇಶವನ್ನು ಹಾಕಿಕೊಂಡು ಸರ್ಕಾರದ 40% ಭ್ರಷ್ಟಾಚಾರವನ್ನು ಪರೋಕ್ಷವಾಗಿ ಎತ್ತಿ ಹಿಡಿದಿದ್ದಾನೆ.
ಈ ಸ್ಟೇಟಸ್ ಅನ್ನು ಗಮನಿಸಿದಾಗ, ಒಬ್ಬ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಸರ್ಕಾರದ ವಿರುದ್ಧ ಬಹಿರಂಗವಾಗಿ ಭ್ರಷ್ಟಾಚಾರದ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿರುತ್ತಾನೆ. ಹಾಗಾದರೆ ಒಬ್ಬ ಜವಾಬ್ದಾರಿ ಹುದ್ದೆಯಲ್ಲಿ ಇದ್ದುಕೊಂಡು , ತನ್ನದೇ ಇಲಾಖೆಯ ಮೇಲಾಧಿಕಾರಿಗೆ, ತುಂಬಾ ಗಂಭೀರವಾದ ಪ್ರಕರಣವನ್ನು ಏನು ಕ್ರಮ ಕೈಗೊಳ್ಳದೆ ,ಮುಚ್ಚಿ ಹಾಕಿದ್ದಾರೆ ಎಂದರೆ, ಎಷ್ಟು ಹಣ ನುಂಗಿರಬಹುದು ಎಂಬುದು ಕಾಡದೆ ಇರಲಾರದು.
ಇನ್ನೂ ಇದೇ ತರಹ ಅನೇಕ ಪ್ರಕರಣಗಳು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭ್ರಷ್ಟಾಚಾರ ಮಾಡಿದ್ದಾರೆ ಎಂಬುದು ದೃಢವಾದಂತಾಗಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾದಂತಹ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಚೇರಿ ಸೂಚನೆ ಮೇರೆಗೆ ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ತನಿಖೆ ನಡೆಸಿ ಶಿಕ್ಷಕಿಯ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆದಿರುವುದಿಲ್ಲ ಎಂದು ವರದಿಯನ್ನು ನೀಡಿರುತ್ತದೆ.
ಈ ರೀತಿ ವರದಿಯನ್ನು ನೀಡಿದ ನಂತರವೂ ಶಿಕ್ಷಕನೊಬ್ಬ ತನ್ನ ಮೇಲಾಧಿಕಾರಿ ಸರಿಯಾದ ರೀತಿಯಲ್ಲಿ ತನಿಖೆ ನಡೆಸಿಲ್ಲ ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ ಎಂದು ಹೇಳುತ್ತಿದ್ದಾನೆ, ಎಂದರೆ ನಿಜಕ್ಕೂ ಇದು ಈ ರೀತಿ ನಡೆದಿದೆಯಾ? ನಮ್ಮ ರಾಜ್ಯ ಸರ್ಕಾರವನ್ನು 40% ಸರ್ಕಾರ ಎಂದು ಜನರು ಸರ್ಕಾರಕ್ಕೆ ಟೀಕಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಒಬ್ಬ ಶಿಕ್ಷಕ ಶಿಕ್ಷಣ ಇಲಾಖೆಯ ಭ್ರಷ್ಟಾಚಾರ-ಅವ್ಯವಸ್ಥೆಯ ಬಗ್ಗೆ ಧ್ವನಿ ಎತ್ತಿದ್ದಾನೆ ಎಂದರೆ, ಎಷ್ಟರ ಮಟ್ಟಿಗೆ ಸರ್ಕಾರ ಆವ್ಯವಸ್ಥೆ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರಬೇಕು.
ಪೋಲಿಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆ ನೀಡಿರುವ ವರದಿಗಳು ಸುಳ್ಳಾ? ಅಥವಾ ಶಿಕ್ಷಕನೇ ಸರ್ಕಾರದ ವಿರುದ್ಧ ಸಂಘಗಳನ್ನು ಎತ್ತಿ ಕಟ್ಟಲು ಮುಂದಾಗಿದ್ದಾನಾ?
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…