ಈ ಘಟನೆ ನಡೆದಿರುವುದು ಶಿಕ್ಷಣ ಸಚಿವರ ತವರಿನಲ್ಲಿ. ಇವನು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಅಷ್ಟೇ ಅಲ್ಲಾ, ಈತನ ವಾಟ್ಸಪ್ ನಲ್ಲಿ ಶಿರಾ ತಾಲೂಕಿನ ಶಿಕ್ಷಕಿ ಒಬ್ಬರು ನೀಡಿದ ಮಾನಸಿಕ ಕಿರುಕುಳದ ದೂರಿಗೆ ಸಂಬಂಧಿಸಿದಂತೆ, ಏನೂ ಕ್ರಮ ಕೈಗೊಳ್ಳದೆ, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮುಚ್ಚಿ ಹಾಕಿದ್ದಾರೆ,ಎಂಬ ಸಂದೇಶವನ್ನು ಹಾಕಿಕೊಂಡು ಸರ್ಕಾರದ 40% ಭ್ರಷ್ಟಾಚಾರವನ್ನು ಪರೋಕ್ಷವಾಗಿ ಎತ್ತಿ ಹಿಡಿದಿದ್ದಾನೆ.
ಈ ಸ್ಟೇಟಸ್ ಅನ್ನು ಗಮನಿಸಿದಾಗ, ಒಬ್ಬ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಸರ್ಕಾರದ ವಿರುದ್ಧ ಬಹಿರಂಗವಾಗಿ ಭ್ರಷ್ಟಾಚಾರದ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿರುತ್ತಾನೆ. ಹಾಗಾದರೆ ಒಬ್ಬ ಜವಾಬ್ದಾರಿ ಹುದ್ದೆಯಲ್ಲಿ ಇದ್ದುಕೊಂಡು , ತನ್ನದೇ ಇಲಾಖೆಯ ಮೇಲಾಧಿಕಾರಿಗೆ, ತುಂಬಾ ಗಂಭೀರವಾದ ಪ್ರಕರಣವನ್ನು ಏನು ಕ್ರಮ ಕೈಗೊಳ್ಳದೆ ,ಮುಚ್ಚಿ ಹಾಕಿದ್ದಾರೆ ಎಂದರೆ, ಎಷ್ಟು ಹಣ ನುಂಗಿರಬಹುದು ಎಂಬುದು ಕಾಡದೆ ಇರಲಾರದು.
ಇನ್ನೂ ಇದೇ ತರಹ ಅನೇಕ ಪ್ರಕರಣಗಳು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭ್ರಷ್ಟಾಚಾರ ಮಾಡಿದ್ದಾರೆ ಎಂಬುದು ದೃಢವಾದಂತಾಗಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾದಂತಹ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಚೇರಿ ಸೂಚನೆ ಮೇರೆಗೆ ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ತನಿಖೆ ನಡೆಸಿ ಶಿಕ್ಷಕಿಯ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆದಿರುವುದಿಲ್ಲ ಎಂದು ವರದಿಯನ್ನು ನೀಡಿರುತ್ತದೆ.
ಈ ರೀತಿ ವರದಿಯನ್ನು ನೀಡಿದ ನಂತರವೂ ಶಿಕ್ಷಕನೊಬ್ಬ ತನ್ನ ಮೇಲಾಧಿಕಾರಿ ಸರಿಯಾದ ರೀತಿಯಲ್ಲಿ ತನಿಖೆ ನಡೆಸಿಲ್ಲ ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ ಎಂದು ಹೇಳುತ್ತಿದ್ದಾನೆ, ಎಂದರೆ ನಿಜಕ್ಕೂ ಇದು ಈ ರೀತಿ ನಡೆದಿದೆಯಾ? ನಮ್ಮ ರಾಜ್ಯ ಸರ್ಕಾರವನ್ನು 40% ಸರ್ಕಾರ ಎಂದು ಜನರು ಸರ್ಕಾರಕ್ಕೆ ಟೀಕಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಒಬ್ಬ ಶಿಕ್ಷಕ ಶಿಕ್ಷಣ ಇಲಾಖೆಯ ಭ್ರಷ್ಟಾಚಾರ-ಅವ್ಯವಸ್ಥೆಯ ಬಗ್ಗೆ ಧ್ವನಿ ಎತ್ತಿದ್ದಾನೆ ಎಂದರೆ, ಎಷ್ಟರ ಮಟ್ಟಿಗೆ ಸರ್ಕಾರ ಆವ್ಯವಸ್ಥೆ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರಬೇಕು.
ಪೋಲಿಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆ ನೀಡಿರುವ ವರದಿಗಳು ಸುಳ್ಳಾ? ಅಥವಾ ಶಿಕ್ಷಕನೇ ಸರ್ಕಾರದ ವಿರುದ್ಧ ಸಂಘಗಳನ್ನು ಎತ್ತಿ ಕಟ್ಟಲು ಮುಂದಾಗಿದ್ದಾನಾ?
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್…
ಛತ್ತರ್ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್ನೊಳಗೆ ಯುವತಿ ಹಾಗೂ ಇಬ್ಬರು…
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…