Latest

ಪಾಠ ಮುಗಿಸಿ ಮನೆಗೆ ಹೋಗುತ್ತಿದ್ದ ಶಿಕ್ಷಕಿಯ ಮೇಲೆ ಸಾಮೂಹಿಕ ಅತ್ಯಾಚಾರ!

ಉತ್ತರ ಪ್ರದೇಶ ರಾಜಧಾನಿ ಲಕ್ನೋನಲ್ಲಿ ಶಿಕ್ಷಕಿಯೊಬ್ಬರು ತಮ್ಮ ವಿದ್ಯಾರ್ಥಿಗಳಿಗೆ ಮನೆ ಪಾಠ ನೀಡಿ ವಾಪಾಸ್ ಆಟೋದಲ್ಲಿ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಅವರ ಮೇಲೆ ಚಾಲಕ ಸೇರಿದಂತೆ ಮತ್ತೊಬ್ಬ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ.

ಶನಿವಾರದಂದು ಈ ಘಟನೆ ನಡೆದಿದ್ದು, ಶಿಕ್ಷಕಿ ಆಟೋ ಏರಿದ ವೇಳೆ ಚಾಲಕನ ಜೊತೆ ಆಕಾಶ್ ತಿವಾರಿ ಎಂಬಾತನೂ ಸಹ ಇದ್ದನೆನ್ನಲಾಗಿದೆ. ಇಬ್ಬರೂ ಸೇರಿ ಶಿಕ್ಷಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಶಿಕ್ಷಕಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿದ್ದು, ಅಂದು ರಾತ್ರಿಯೇ ಆರೋಪಿಗಳ ವಿರುದ್ಧ ದೂರು ದಾಖಲಿಸಲು ಶಿಕ್ಷಕಿ ಮೂರ್ನಾಲ್ಕು ಠಾಣೆಗಳಿಗೆ ಹೋದರೂ ಸೂಕ್ತ ಪ್ರತಿಕ್ರಿಯೆ ಸಿಕ್ಕಿಲ್ಲ. ನಂತರ ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ಮಾಹಿತಿ ವೈರಲ್ ಆಗಿದ್ದು ಬಳಿಕ ಎಚ್ಚೆತ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದೀಗ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪೊಲೀಸ್ ಔಟ್ ಸ್ಟೇಷನ್ ಉಸ್ತುವಾರಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ಉಳಿದ ಮೂರು ಪೊಲೀಸ್ ಠಾಣೆಗಳ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಅಲ್ಲದೆ ಆರೋಪಿ ಆಕಾಶ್ ತಿವಾರಿ ಎಂಬಾತನನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಆಟೋ ಚಾಲಕನ ಪತ್ತೆಗೆ ಬಲೆ ಬೀಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

9 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

9 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

22 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

22 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

22 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

23 hours ago