ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ಸಮಾಜವೇ ತಲೆತಗ್ಗಿಸುವಂತಹ ಕ್ರೂರ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 2ರಂದು ಸಂಜೆ, ಸರ್ಕಾರಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ 35 ವರ್ಷದ ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಈ ದಾಳಿ ನಡೆದಿದೆ.
ಅಪರಿಚಿತ ವ್ಯಕ್ತಿಯೊಬ್ಬ ‘ದಾಹವಾಗಿದೆ, ಕುಡಿಯಲು ನೀರು ಕೊಡಿ’ ಎಂದು ಕೇಳಿ ವಿಶ್ವಾಸ ಗಳಿಸಿ ಮನೆಯೊಳಗೆ ಪ್ರವೇಶಿಸಿದ್ದಾನೆ. ಒಳಗೆ ಹೋದ ತಕ್ಷಣವೇ ಆತ ಮಹಿಳೆಯ ಮೇಲೆ ಲೈಂಗಿಕ ದಾಳಿಗೆ ಮುಂದಾಗಿದ್ದಾನೆ.
ಸಂತ್ರಸ್ತೆ ತನ್ನ ಆರೋಗ್ಯ ಸಮಸ್ಯೆಯನ್ನು ಉಲ್ಲೇಖಿಸಿ ಮನವಿ ಮಾಡಿಕೊಂಡರೂ, ಆರೋಪಿಯು ಯಾವುದೇ ಕರುಣೆ ತೋರದೇ, ಆಕೆಯ ಕುತ್ತಿಗೆಗೆ ಸ್ಕಾರ್ಫ್ನಿಂದ ಬಿಗಿದು, ಕತ್ತಿ ತೋರಿಸಿ ಬೆದರಿಸಿ ಅತ್ಯಾಚಾರ ಎಸಗಿದ್ದಾನೆ. ನಂತರವೂ ಕ್ರೂರತೆಯನ್ನು ಮುಂದುವರಿಸಿ, ಮಹಿಳೆಯನ್ನು ಅಮಾನುಷವಾಗಿ ಹಿಂಸಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆ ಬೆಳಕಿಗೆ ಬಂದಿದ್ದು ಹೇಗೆ?
ಮಹಿಳೆಯ ಜೊತೆ ವಾಸವಿದ್ದ ಸೋದರಳಿಯನು ಪರೀಕ್ಷೆ ಮುಗಿಸಿ ತನ್ನ ಪೋಷಕರ ಮನೆಗೆ ಹೋಗಿದ್ದನು. ಸಾಯಂಕಾಲ ಅತ್ತೆಗೆ ಕರೆ ಮಾಡಿದಾಗ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಅನುಮಾನಗೊಂಡು ಸಂಬಂಧಿಕರನ್ನು ಮನೆಗೆ ಕಳುಹಿಸಿದ್ದಾನೆ. ಅವರು ಮನೆಗೆ ತೆರಳಿ ನೋಡಿದಾಗ ಮಹಿಳೆ ರಕ್ತದ ಮಡುವಿನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದಾರೆ.
ತಕ್ಷಣವೇ ಅವರನ್ನು ನರಸರಾವ್ ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ಪ್ರಕಾರ ಸದ್ಯ ಮಹಿಳೆಯ ಆರೋಗ್ಯ ಸ್ಥಿರವಾಗಿದೆ.
ಪೊಲೀಸ್ ಕ್ರಮ:
ಈ ಸಂಬಂಧ ಮಾಚೆರ್ಲಾ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪತ್ತೆಹಚ್ಚಲು ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಪಟ್ಟಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಕಾರ್ಯ ನಡೆಯುತ್ತಿದ್ದು, ಆರೋಪಿಗಾಗಿ ಹುಡುಕಾಟ ಮುಂದುವರಿದಿದೆ.
ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ರೈತ ಮಹಿಳೆ ಸುಜಾತ ಅವರ ಭೂಮಿ ವಿವಾದ ಇದೀಗ ಹೊಸ ಹಂತ ತಲುಪಿದ್ದು, ಮಾಜಿ…
ರಾಯಚೂರಿನಲ್ಲಿ ಸರ್ಕಾರಿ ಕಚೇರಿಯಲ್ಲೇ ಗುಂಡು-ತುಂಡಿನ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಮೂವರು ಸಿಬ್ಬಂದಿಯನ್ನು…
ಭಟ್ಕಳ: ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸಿಗೆ ಕೊನೆಗೂ ಜಯ ಸಿಕ್ಕಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ…
ಹಳಿಯಾಳ: ಸುಲಿಗೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಮೂರು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ನ್ನು…
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಮಾನವೀಯತೆಯನ್ನೇ ಮರೆಸುವಂತಹ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ 13…