ಜಾರ್ಖಂಡ್ನ ನೊಮುಂಡಿಯಲ್ಲಿ ವಿಚಿತ್ರ ಕಳ್ಳತನ ಪ್ರಕರಣವೇ ಬೆಳಕಿಗೆ ಬಂದಿದೆ. ಮದ್ಯಪಾನ ಮಾಡಿದ ಯುವಕನೊಬ್ಬ ದೇವಾಲಯದೊಳಗೆ ನುಗ್ಗಿ ಕಳ್ಳತನ ಮಾಡಿದ್ದ ವೇಳೆ ಕುಡಿದ ಮತ್ತಿನಲ್ಲಿ ಅಲ್ಲೇ ಮಲಗಿ ಬಿದ್ದ ಘಟನೆ ಬೆಳಗಿನ ಜಾವ ಬಹಿರಂಗವಾಗಿದೆ.
ರಾತ್ರಿ ಹೆಚ್ಚು ಮದ್ಯ ಸೇವಿಸಿದ ವೀರ್ ನಾಯಕ್ ಎಂಬ ಯುವಕ, ತನ್ನ ಸ್ನೇಹಿತರೊಂದಿಗೆ ಕುಡಿದು ತಿರುಗಾಡುತ್ತಿದ್ದ. ನಂತರ ನೊಮುಂಡಿಯಲ್ಲಿರುವ ಕಾಳಿ ದೇವಾಲಯದ ಗೋಡೆಯ ಮೇಲೆ ಹತ್ತಿ, ಬಾಗಿಲಿನ ಬೀಗ ಮುರಿದು ಒಳನುಗ್ಗಿದ್ದಾನೆ. ದೇವಾಲಯದ ಒಳಗಡೆ ಪ್ರವೇಶಿಸಿದ ನಂತರ, ಅಲಂಕಾರ ಸಾಮಗ್ರಿಗಳು, ಗಂಟೆ, ಪೂಜಾ ಥಾಲಿ, ಚಿನ್ನ–ಬೆಳ್ಳಿ ಆಭರಣಗಳು ಮತ್ತು ದೇವರ ಕಿರೀಟವನ್ನೂ ಸೇರಿ ಹಲವಾರು ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾನೆ.
ಕದ್ದ ವಸ್ತುಗಳನ್ನು ತನ್ನ ಬ್ಯಾಗಿನಲ್ಲಿ ತುಂಬಿಕೊಂಡು ದೇವಾಲಯದಿಂದ ಪಲಾಯನಗೊಳ್ಳಲು ಸಿದ್ಧತೆ ನಡೆಸುತ್ತಿದ್ದ ಆತನಿಗೆ ಮದ್ಯದ ನಿಂದ್ರೆ ಕಾಡಿದ್ದು, ಅಲ್ಲಿಯೇ ಮಲಗಿ ಹೋಗಿದ್ದಾನೆ. ಬೆಳಿಗ್ಗೆ ದೇವಾಲಯಕ್ಕೆ ಆಗಮಿಸಿದ ಅರ್ಚಕರು ಮತ್ತು ಭಕ್ತರು ಈ ದೃಶ್ಯವನ್ನು ನೋಡಿ ತೀವ್ರ ಅಚ್ಚರಿ ವ್ಯಕ್ತಪಡಿಸಿದ್ದಾರೆ. ದೇವರ ಕಿರೀಟವನ್ನು ಹಿಡಿದು ಮಲಗಿದ್ದ ವೀರ್ ನಾಯಕ್ನ ಫೋಟೋಗಳು ಈಗ ಹಬ್ಬಿಹೋಗಿವೆ.
ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಕಳ್ಳನನ್ನು ಬಂಧಿಸಿ, ದೇವಾಲಯದಿಂದ ಕಳವು ಮಾಡಿದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ತನಿಖೆ ಮುಂದುವರೆದಿದ್ದು, ಈತನ ಹಿಂದೆ ಇನ್ನೂ ಯಾರಾದರೂ ಸೇರಿಕೊಂಡಿರಬಹುದಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…
ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್ ರಾಜ್…
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…