Latest

ಯುವತಿಯರ ಸ್ನೇಹ ಸಲಿಂಗ ಕಾಮಕ್ಕೆ ತಿರುಗಿ ನಡೆದೇ ಹೋಯಿತು ದುರಂತ

ಸ್ನೇಹ ಹಾಗೂ ಲಾಸಿ ಎನ್ನುವ ಯುವತಿಯರಿಬ್ಬರು ದಾವಣಗೆರೆಯ ಪದವಿ ವ್ಯಾಸಾಂಗ ಮಾಡುತ್ತಿದ್ದು, ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಅತ್ಮೀಯವಾಗಿದ್ದರು. ಬಳಿಕ ಇಬ್ಬರ ಮಧ್ಯೆ ಪ್ರೀತಿ ಚಿಗುರೊಡೆದಿದೆ. ಅದು ಮತ್ತೊಂದು ಹೆಜ್ಜೆ ಮುಂದಕ್ಕೆ ಹೋಗಿ ಸಲಿಂಗಕಾಮಕ್ಕೆ ತಿರುಗಿದೆ. ಆದ್ರೆ, ಆ ಯುವತಿಯು ಪರ ಯುವತಿಯೊಂದಿಗೆ ಫೋನ್​ನಲ್ಲಿ ಮಾತನಾಡಿದ್ದಾಳೆ ಎಂಬ ಒಂದೇ ಕಾರಣಕ್ಕೆ ಸಲಿಂಗಕಾಮಿ ರೇಡಿಯಂ ಕಟರ್‌ನಿಂದ ಹಲ್ಲೆ ನಡೆಸಿದ್ದಾಳೆ. ಈ ಪ್ರಕರಣ ದಾವಣಗೆರೆ ನಗರದ ಶಾಂತಿ ನಗರದಲ್ಲಿ ನಡೆದಿದೆ.
ಕಡೂರು ಮೂಲದ ಲಾಸಿ ಎನ್ನುವ ಯುವತಿ ದಾವಣಗೆರೆಯ ಶಾಂತಿ ನಗರದ ಸ್ನೇಹ ಎನ್ನುವ ಯುವತಿಗೆ ರೇಡಿಯಂ ಕಟರ್ ನಿಂದ ಹಲ್ಲೆ ನಡೆಸಿ ತಾನು ಕೈ ಕೊಯ್ದುಕೊಂಡಿದ್ದಾಳೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಲಾಸಿ ಹಾಗು ಸ್ನೇಹ ಇಬ್ಬರು ಯುವತಿಯರನ್ನು ನೋಡಿ ಕುಟುಂಬಸ್ಥರು ಒಂದು ಕ್ಷಣ ದಂಗ್ ಆಗಿ ಹೋಗಿದ್ದರು. ಬಳಿಕ ಇಬ್ಬರು ಯುವತಿಯರನ್ನು ಸ್ಥಳೀಯರು ಹಾಗೂ ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಇಬ್ಬರು ಕೂಡ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಹಲ್ಲೆಗೊಳಗಾದ ಯುವತಿ ಸ್ನೇಹ ಇತ್ತೀಚೆಗೆ ಬೇರೆ ಯುವತಿಯ ಜೊತೆ ಮಾತನಾಡಿ ಆತ್ಮೀಯವಾಗಿದ್ದ ಒಂದೇ ಕಾರಣ ಲಾಸಿಗೆ ಸಿಟ್ಟು ಬಂದಿದೆ. ಯುವತಿ ಲಾಸಿ ನಿನ್ನೇ (ಅ.20) ಸ್ನೇಹ ಮನೆಗೆ ನುಗ್ಗಿ ರೇಡಿಯಂ ಕಟರ್ ನಿಂದ ಮನಬಂದಂತೆ ಕುತ್ತಿಗೆ, ಕೆನ್ನೆ, ಹಾಗೂ ಕೈಗೆ ಗಂಭೀರ ಗಾಯಗೊಳಿಸಿದ್ದಾಳೆ. ಬಳಿಕ ತಾನು ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಈ ಸಂಬಂಧ ವಿದ್ಯಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಯತ್ನ ನಡೆಸಿದ ಲಾಸಿ ವಿರುದ್ದ 307 ಕೇಸ್ ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

13 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

13 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

13 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago