ಸ್ನೇಹ ಹಾಗೂ ಲಾಸಿ ಎನ್ನುವ ಯುವತಿಯರಿಬ್ಬರು ದಾವಣಗೆರೆಯ ಪದವಿ ವ್ಯಾಸಾಂಗ ಮಾಡುತ್ತಿದ್ದು, ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಅತ್ಮೀಯವಾಗಿದ್ದರು. ಬಳಿಕ ಇಬ್ಬರ ಮಧ್ಯೆ ಪ್ರೀತಿ ಚಿಗುರೊಡೆದಿದೆ. ಅದು ಮತ್ತೊಂದು ಹೆಜ್ಜೆ ಮುಂದಕ್ಕೆ ಹೋಗಿ ಸಲಿಂಗಕಾಮಕ್ಕೆ ತಿರುಗಿದೆ. ಆದ್ರೆ, ಆ ಯುವತಿಯು ಪರ ಯುವತಿಯೊಂದಿಗೆ ಫೋನ್ನಲ್ಲಿ ಮಾತನಾಡಿದ್ದಾಳೆ ಎಂಬ ಒಂದೇ ಕಾರಣಕ್ಕೆ ಸಲಿಂಗಕಾಮಿ ರೇಡಿಯಂ ಕಟರ್ನಿಂದ ಹಲ್ಲೆ ನಡೆಸಿದ್ದಾಳೆ. ಈ ಪ್ರಕರಣ ದಾವಣಗೆರೆ ನಗರದ ಶಾಂತಿ ನಗರದಲ್ಲಿ ನಡೆದಿದೆ.
ಕಡೂರು ಮೂಲದ ಲಾಸಿ ಎನ್ನುವ ಯುವತಿ ದಾವಣಗೆರೆಯ ಶಾಂತಿ ನಗರದ ಸ್ನೇಹ ಎನ್ನುವ ಯುವತಿಗೆ ರೇಡಿಯಂ ಕಟರ್ ನಿಂದ ಹಲ್ಲೆ ನಡೆಸಿ ತಾನು ಕೈ ಕೊಯ್ದುಕೊಂಡಿದ್ದಾಳೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಲಾಸಿ ಹಾಗು ಸ್ನೇಹ ಇಬ್ಬರು ಯುವತಿಯರನ್ನು ನೋಡಿ ಕುಟುಂಬಸ್ಥರು ಒಂದು ಕ್ಷಣ ದಂಗ್ ಆಗಿ ಹೋಗಿದ್ದರು. ಬಳಿಕ ಇಬ್ಬರು ಯುವತಿಯರನ್ನು ಸ್ಥಳೀಯರು ಹಾಗೂ ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಇಬ್ಬರು ಕೂಡ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಹಲ್ಲೆಗೊಳಗಾದ ಯುವತಿ ಸ್ನೇಹ ಇತ್ತೀಚೆಗೆ ಬೇರೆ ಯುವತಿಯ ಜೊತೆ ಮಾತನಾಡಿ ಆತ್ಮೀಯವಾಗಿದ್ದ ಒಂದೇ ಕಾರಣ ಲಾಸಿಗೆ ಸಿಟ್ಟು ಬಂದಿದೆ. ಯುವತಿ ಲಾಸಿ ನಿನ್ನೇ (ಅ.20) ಸ್ನೇಹ ಮನೆಗೆ ನುಗ್ಗಿ ರೇಡಿಯಂ ಕಟರ್ ನಿಂದ ಮನಬಂದಂತೆ ಕುತ್ತಿಗೆ, ಕೆನ್ನೆ, ಹಾಗೂ ಕೈಗೆ ಗಂಭೀರ ಗಾಯಗೊಳಿಸಿದ್ದಾಳೆ. ಬಳಿಕ ತಾನು ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಈ ಸಂಬಂಧ ವಿದ್ಯಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಯತ್ನ ನಡೆಸಿದ ಲಾಸಿ ವಿರುದ್ದ 307 ಕೇಸ್ ದಾಖಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…