ಸ್ನೇಹ ಹಾಗೂ ಲಾಸಿ ಎನ್ನುವ ಯುವತಿಯರಿಬ್ಬರು ದಾವಣಗೆರೆಯ ಪದವಿ ವ್ಯಾಸಾಂಗ ಮಾಡುತ್ತಿದ್ದು, ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಅತ್ಮೀಯವಾಗಿದ್ದರು. ಬಳಿಕ ಇಬ್ಬರ ಮಧ್ಯೆ ಪ್ರೀತಿ ಚಿಗುರೊಡೆದಿದೆ. ಅದು ಮತ್ತೊಂದು ಹೆಜ್ಜೆ ಮುಂದಕ್ಕೆ ಹೋಗಿ ಸಲಿಂಗಕಾಮಕ್ಕೆ ತಿರುಗಿದೆ. ಆದ್ರೆ, ಆ ಯುವತಿಯು ಪರ ಯುವತಿಯೊಂದಿಗೆ ಫೋನ್ನಲ್ಲಿ ಮಾತನಾಡಿದ್ದಾಳೆ ಎಂಬ ಒಂದೇ ಕಾರಣಕ್ಕೆ ಸಲಿಂಗಕಾಮಿ ರೇಡಿಯಂ ಕಟರ್ನಿಂದ ಹಲ್ಲೆ ನಡೆಸಿದ್ದಾಳೆ. ಈ ಪ್ರಕರಣ ದಾವಣಗೆರೆ ನಗರದ ಶಾಂತಿ ನಗರದಲ್ಲಿ ನಡೆದಿದೆ.
ಕಡೂರು ಮೂಲದ ಲಾಸಿ ಎನ್ನುವ ಯುವತಿ ದಾವಣಗೆರೆಯ ಶಾಂತಿ ನಗರದ ಸ್ನೇಹ ಎನ್ನುವ ಯುವತಿಗೆ ರೇಡಿಯಂ ಕಟರ್ ನಿಂದ ಹಲ್ಲೆ ನಡೆಸಿ ತಾನು ಕೈ ಕೊಯ್ದುಕೊಂಡಿದ್ದಾಳೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಲಾಸಿ ಹಾಗು ಸ್ನೇಹ ಇಬ್ಬರು ಯುವತಿಯರನ್ನು ನೋಡಿ ಕುಟುಂಬಸ್ಥರು ಒಂದು ಕ್ಷಣ ದಂಗ್ ಆಗಿ ಹೋಗಿದ್ದರು. ಬಳಿಕ ಇಬ್ಬರು ಯುವತಿಯರನ್ನು ಸ್ಥಳೀಯರು ಹಾಗೂ ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಇಬ್ಬರು ಕೂಡ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಹಲ್ಲೆಗೊಳಗಾದ ಯುವತಿ ಸ್ನೇಹ ಇತ್ತೀಚೆಗೆ ಬೇರೆ ಯುವತಿಯ ಜೊತೆ ಮಾತನಾಡಿ ಆತ್ಮೀಯವಾಗಿದ್ದ ಒಂದೇ ಕಾರಣ ಲಾಸಿಗೆ ಸಿಟ್ಟು ಬಂದಿದೆ. ಯುವತಿ ಲಾಸಿ ನಿನ್ನೇ (ಅ.20) ಸ್ನೇಹ ಮನೆಗೆ ನುಗ್ಗಿ ರೇಡಿಯಂ ಕಟರ್ ನಿಂದ ಮನಬಂದಂತೆ ಕುತ್ತಿಗೆ, ಕೆನ್ನೆ, ಹಾಗೂ ಕೈಗೆ ಗಂಭೀರ ಗಾಯಗೊಳಿಸಿದ್ದಾಳೆ. ಬಳಿಕ ತಾನು ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಈ ಸಂಬಂಧ ವಿದ್ಯಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಯತ್ನ ನಡೆಸಿದ ಲಾಸಿ ವಿರುದ್ದ 307 ಕೇಸ್ ದಾಖಲಾಗಿದೆ.
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್…
ಛತ್ತರ್ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್ನೊಳಗೆ ಯುವತಿ ಹಾಗೂ ಇಬ್ಬರು…
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…