ವಿಜಯಪುರ: ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ನಾಲ್ವರು ಮಕ್ಕಳು ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ.
ಗಂಡ ಹೆಂಡತಿಯ ಜಗಳ ಮಧ್ಯದಲ್ಲಿ 4 ಮಕ್ಕಳ ಜೀವ ಹೋಗಿದ್ದು ನಿಜಕ್ಕೂ ಮನಕಲಕುವ ಘಟನೆ,
ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ ಭಜಂತ್ರಿ (5), ರಕ್ಷಾ ನಿಂಗರಾಜ ಭಜಂತ್ರಿ (3), ಹಸನ್ ನಿಂಗರಾಜ ಭಜಂತ್ರಿ ಹಾಗೂ ಹುಸೇನ್ ನಿಂಗರಾಜ ಭಜಂತ್ರಿ (13 ತಿಂಗಳು) ಮೃತ ಮಕ್ಕಳು. ನಾಲ್ವರು ಮಕ್ಕಳ ತಾಯಿ ಭಾಗ್ಯ ಭಜಂತ್ರಿಯನ್ನ ಸ್ಥಳಿಯರು ಕಾಪಾಡಿದ್ದಾರೆ. ಕೌಟುಂಬಿಕ ಕಾರಣವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ಬಹುದಿನಗಳಿಂದ ಭಾಗ್ಯಳ ಪತಿ ನಿಂಗರಾಜ ಅಣ್ಣತಮ್ಮಂದಿರ ಮಧ್ಯೆ ಆಸ್ತಿಗಾಗಾಗಿ ಕಲಹ ನಡೆದಿತ್ತು. ಆಸ್ತಿಯಲ್ಲಿ ಬಿಡಿಗಾಸು ಕೊಡಲ್ಲ ಅಂತಾ ಲಿಂಗರಾಜ್ಗೆ ಅಣ್ಣತಮ್ಮಂದಿರು ಹೇಳಿದ್ದರು. ಅದೆ ರೀತಿ ಇಂದು ಕೂಡ ಪರಸ್ಪರ ಗಲಾಟೆ ನಡೆದಿತ್ತು. ಗಲಾಟೆಯ ನಂತರ ಮನೆಯಿಂದ ತೆಲಗಿಗೆ ಹೊರಟಾಗ ಕಾಲುವೆ ಹತ್ತಿರ ನಿಂಗರಾಜನ ದ್ವಿಚಕ್ರ ವಾಹನದ ಪೆಟ್ರೋಲ್ ಖಾಲಿ ಆಗಿದೆ. ಆಗ ಪೆಟ್ರೋಲ್ ತರಲೆಂದು ನಿಂಗರಾಜ ಸ್ವಲ್ಪ ದೂರ ಹೋಗುತ್ತಿದ್ದಂತೆ ಭಾಗ್ಯ ಮಕ್ಕಳೊಂದಿಗೆ ಕಾಲುವೆಗೆ ಹಾರಿದ್ದಾಳೆ ಎಂದು ಪತಿ ನಿಂಗರಾಜ ಕಣ್ಣೀರು ಹಾಕುತ್ತಿದ್ದಾನೆ. ನಿಂಗರಾಜ ಹಾಲಿ ತೆಲಗಿ ಗ್ರಾಮ ಪಂ ಸದಸ್ಯನಾಗಿದ್ದು, ಮೊಹರಂನಲ್ಲಿ ದೇವರನ್ನು ಹೊರುತ್ತಿದ್ದರು. ಈ ಕಾರಣದಿಂದ ಗಂಡು ಮಕ್ಕಳಿಗೆ ಹಸೇನ್ ಹಾಗೂ ಹುಸೇನ್ ಎಂದು ಹೆಸರಿಡಲಾಗಿದೆ.
ಸದ್ಯ ಇಬ್ಬರು ಹೆಣ್ಣು ಮಕ್ಕಳ ಮೃತದೇಹವನ್ನು ಮೀನುಗಾರರು ಹೊರತೆಗೆದಿದ್ದಾರೆ. ಇಬ್ಬರು ಗಂಡು ಮಕ್ಕಳ ಶವಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಶವ ಶೋಧಕಾರ್ಯ ಮುಂದುವರಿದಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವರದಿ: ದಾವಲಸಬ್. ಬನ್ನೇಟ್ಟಿ
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…