Latest

ವಿಜಯಪುರದಲ್ಲಿ ನಾಲ್ವರು ಮಕ್ಕಳ ಜೋತೆ ಕಾಲುವೆಗೆ ಜಿಗಿದ ಮಹಿಳೆ: ಕಂದಮ್ಮಗಳು ಸಾವು..

ವಿಜಯಪುರ: ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ನಾಲ್ವರು ಮಕ್ಕಳು ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ.
ಗಂಡ ಹೆಂಡತಿಯ ಜಗಳ ಮಧ್ಯದಲ್ಲಿ 4 ಮಕ್ಕಳ ಜೀವ ಹೋಗಿದ್ದು ನಿಜಕ್ಕೂ ಮನಕಲಕುವ ಘಟನೆ,
ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ ಭಜಂತ್ರಿ (5), ರಕ್ಷಾ ನಿಂಗರಾಜ ಭಜಂತ್ರಿ (3), ಹಸನ್ ನಿಂಗರಾಜ ಭಜಂತ್ರಿ ಹಾಗೂ ಹುಸೇನ್ ನಿಂಗರಾಜ ಭಜಂತ್ರಿ (13 ತಿಂಗಳು) ಮೃತ ಮಕ್ಕಳು. ನಾಲ್ವರು ಮಕ್ಕಳ ತಾಯಿ ಭಾಗ್ಯ ಭಜಂತ್ರಿಯನ್ನ ಸ್ಥಳಿಯರು ಕಾಪಾಡಿದ್ದಾರೆ. ಕೌಟುಂಬಿಕ ಕಾರಣವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ಬಹುದಿನಗಳಿಂದ ಭಾಗ್ಯಳ ಪತಿ ನಿಂಗರಾಜ ಅಣ್ಣತಮ್ಮಂದಿರ ಮಧ್ಯೆ ಆಸ್ತಿಗಾಗಾಗಿ ಕಲಹ ನಡೆದಿತ್ತು. ಆಸ್ತಿಯಲ್ಲಿ ಬಿಡಿಗಾಸು ಕೊಡಲ್ಲ ಅಂತಾ ಲಿಂಗರಾಜ್‌ಗೆ ಅಣ್ಣತಮ್ಮಂದಿರು ಹೇಳಿದ್ದರು. ಅದೆ ರೀತಿ ಇಂದು ಕೂಡ ಪರಸ್ಪರ ಗಲಾಟೆ ನಡೆದಿತ್ತು. ಗಲಾಟೆಯ ನಂತರ ಮನೆಯಿಂದ ತೆಲಗಿಗೆ ಹೊರಟಾಗ ಕಾಲುವೆ ಹತ್ತಿರ ನಿಂಗರಾಜನ ದ್ವಿಚಕ್ರ ವಾಹನದ ಪೆಟ್ರೋಲ್ ಖಾಲಿ ಆಗಿದೆ. ಆಗ ಪೆಟ್ರೋಲ್ ತರಲೆಂದು ನಿಂಗರಾಜ ಸ್ವಲ್ಪ ದೂರ ಹೋಗುತ್ತಿದ್ದಂತೆ ಭಾಗ್ಯ ಮಕ್ಕಳೊಂದಿಗೆ ಕಾಲುವೆಗೆ ಹಾರಿದ್ದಾಳೆ ಎಂದು ಪತಿ ನಿಂಗರಾಜ ಕಣ್ಣೀರು ಹಾಕುತ್ತಿದ್ದಾನೆ. ನಿಂಗರಾಜ ಹಾಲಿ ತೆಲಗಿ ಗ್ರಾಮ ಪಂ ಸದಸ್ಯನಾಗಿದ್ದು, ಮೊಹರಂನಲ್ಲಿ ದೇವರನ್ನು ಹೊರುತ್ತಿದ್ದರು. ಈ ಕಾರಣದಿಂದ ಗಂಡು ಮಕ್ಕಳಿಗೆ ಹಸೇನ್‌ ಹಾಗೂ ಹುಸೇನ್‌ ಎಂದು ಹೆಸರಿಡಲಾಗಿದೆ.
ಸದ್ಯ ಇಬ್ಬರು ಹೆಣ್ಣು ಮಕ್ಕಳ ಮೃತದೇಹವನ್ನು ಮೀನುಗಾರರು ಹೊರತೆಗೆದಿದ್ದಾರೆ. ಇಬ್ಬರು ಗಂಡು ಮಕ್ಕಳ ಶವಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಶವ ಶೋಧಕಾರ್ಯ ಮುಂದುವರಿದಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವರದಿ: ದಾವಲಸಬ್. ಬನ್ನೇಟ್ಟಿ

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago