Categories: Latest

ರಾತ್ರಿ 3 ಗಂಟೆಗೂ ಆಟೋ ಓಡಿಸುವ ಮಹಿಳೆ; ಹಣಕ್ಕಾಗಿ ಅಲ್ಲ, ಕಾರಣ ಕೇಳಿದ್ರೆ ಸಲಾಂ ಹೊಡೆಯುತ್ತೀರಾ!

ವಡೋದರಾ: ಸಾಮಾನ್ಯವಾಗಿ ಮುಂಜಾನೆ 3 ಗಂಟೆ ಎಂದರೆ ಬಹುತೇಕರು ಗಾಢ ನಿದ್ರೆಯಲ್ಲಿರುವ ಸಮಯ. ರಸ್ತೆಗಳು ಕೂಡ ನಿರ್ಜನವಾಗಿರುತ್ತವೆ. ಆದರೆ ಗುಜರಾತ್‌ನ ವಡೋದರಾದ ಈ ಮಹಿಳೆ ಮಾತ್ರ ಆ ಹೊತ್ತಿನಲ್ಲೂ ಆಟೋ ಓಡಿಸುತ್ತಾ ರಸ್ತೆಯಲ್ಲಿರುತ್ತಾರೆ. ಅವರ ಈ ಕೆಲಸದ ಹಿಂದಿರುವ ಕಾರಣ ತಿಳಿದರೆ ನಿಜಕ್ಕೂ ಮೆಚ್ಚುಗೆ ವ್ಯಕ್ತಪಡಿಸಲೇಬೇಕು.

ಇತ್ತೀಚೆಗೆ ಸನ್ಯಮ್ ಗಾರ್ಗ್ ಎಂಬ ಇನ್‌ಸ್ಟಾಗ್ರಾಂ ಬಳಕೆದಾರರು ಮುಂಜಾನೆ 3 ಗಂಟೆಗೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮಹಿಳೆಯೊಬ್ಬರು ತಮ್ಮ ಪತಿಯೊಂದಿಗೆ ಆಟೋ ಓಡಿಸುತ್ತಿರುವುದನ್ನು ಗಮನಿಸಿದ್ದಾರೆ. ಕುತೂಹಲದಿಂದ ಅವರೊಂದಿಗೆ ಮಾತನಾಡಿದಾಗ, ಈ ಮಹಿಳೆಯ ಸೇವಾ ಮನೋಭಾವದ ಬಗ್ಗೆ ಹಲವು ವಿಚಾರಗಳು ತಿಳಿದುಬಂದಿವೆ.

ಪತಿಯೇ ಆಟೋ ಚಾಲನೆ ಕಲಿಸಿದ್ರು

ಈ ಮಹಿಳೆಯ ಪತಿಯೂ ಆಟೋ ಚಾಲಕರಾಗಿದ್ದಾರೆ. ಪತ್ನಿ ಯಾರ ಮೇಲೂ ಅವಲಂಬಿತರಾಗದೆ ಸ್ವಾವಲಂಬಿಯಾಗಿ ಬದುಕಬೇಕು ಎಂಬ ಉದ್ದೇಶದಿಂದ ಪತಿಯೇ ಅವರಿಗೆ ಆಟೋ ಚಾಲನೆ ಕಲಿಸಿದ್ದಾರೆ. ಇದೀಗ ದಂಪತಿ ಇಬ್ಬರೂ ಕಷ್ಟಪಟ್ಟು ದುಡಿಯುತ್ತಾ ತಮ್ಮ ಇಬ್ಬರು ಮಕ್ಕಳ ಭವಿಷ್ಯ ಕಟ್ಟುತ್ತಿದ್ದಾರೆ.

ಆದರೆ ಈ ಮಹಿಳೆಯ ಆಟೋ ಚಾಲನೆಯ ಉದ್ದೇಶ ಕೇವಲ ಹಣ ಸಂಪಾದಿಸುವುದಲ್ಲ ಎಂಬುದು ವಿಶೇಷ.

ಗರ್ಭಿಣಿಯರು, ರೋಗಿಗಳು ಮತ್ತು ಒಂಟಿ ಮಹಿಳೆಯರಿಗೆ ಉಚಿತ ಸೇವೆ!

ರಾತ್ರಿ ವೇಳೆ ತುರ್ತು ಪರಿಸ್ಥಿತಿ ಎದುರಾದಾಗ ಮಹಿಳೆಯರು, ಮಕ್ಕಳು, ವೃದ್ಧರು ಹಾಗೂ ರೋಗಿಗಳಿಗೆ ವಾಹನ ಸಿಗುವುದು ಕಷ್ಟವಾಗುತ್ತದೆ. ಈ ಸಮಸ್ಯೆಯನ್ನು ಅರಿತಿರುವ ಮಹಿಳಾ ಆಟೋ ಚಾಲಕಿ, ತಡರಾತ್ರಿಯಲ್ಲೂ ಅಗತ್ಯವಿರುವವರಿಗೆ ನೆರವಾಗಲು ಮುಂದಾಗುತ್ತಾರೆ.

ವಿಶೇಷವಾಗಿ ಗರ್ಭಿಣಿಯರು, ಅನಾರೋಗ್ಯದಿಂದ ಬಳಲುತ್ತಿರುವವರು ಹಾಗೂ ಒಂಟಿಯಾಗಿ ಪ್ರಯಾಣಿಸುವ ಮಹಿಳೆಯರು ಆಸ್ಪತ್ರೆಗೆ ತೆರಳಬೇಕಾದ ಸಂದರ್ಭದಲ್ಲಿ ಅವರಿಂದ ಹಣ ಪಡೆಯದೆ ಉಚಿತವಾಗಿ ಆಟೋ ಸೇವೆ ನೀಡುತ್ತಾರೆ ಎನ್ನಲಾಗಿದೆ.

ಪ್ರಯಾಣಿಕರು ಹಣ ನೀಡಲು ಮುಂದಾದರೂ, ತುರ್ತು ಪರಿಸ್ಥಿತಿಯಲ್ಲಿರುವವರಿಂದ ಹಣ ಪಡೆಯಲು ಅವರು ನಿರಾಕರಿಸುತ್ತಾರೆ.

“ಹಣ ಸಂಪಾದನೆ ಮಾತ್ರ ನನ್ನ ಗುರಿಯಲ್ಲ”

“ಕೇವಲ ಹಣ ಸಂಪಾದಿಸುವುದಷ್ಟೇ ನನ್ನ ಗುರಿಯಲ್ಲ. ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕು. ವಿಶೇಷವಾಗಿ ಮಹಿಳೆಯರಿಗೆ ರಾತ್ರಿ ಸಮಯದಲ್ಲೂ ಸುರಕ್ಷಿತವಾಗಿ ಪ್ರಯಾಣಿಸುವ ಭರವಸೆ ಮೂಡಿಸಬೇಕು” ಎಂಬುದು ಅವರ ಆಶಯ ಎನ್ನಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ

ಸನ್ಯಮ್ ಗಾರ್ಗ್ ಅವರು ಹಂಚಿಕೊಂಡಿರುವ ಈ ಮಹಿಳೆಯ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅವರ ಮಾನವೀಯತೆ ಮತ್ತು ಸೇವಾ ಮನೋಭಾವಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ರಾತ್ರಿ 3 ಗಂಟೆಯಲ್ಲೂ ಸ್ವಾರ್ಥವಿಲ್ಲದೆ ಸಂಕಷ್ಟದಲ್ಲಿರುವವರಿಗೆ ನೆರವಾಗುತ್ತಿರುವ ಈ ಮಹಿಳೆ, ನಿಜಕ್ಕೂ ಸಮಾಜದ ‘ರಿಯಲ್ ಹೀರೋ’ ಎಂದು ಹಲವರು ಕೊಂಡಾಡುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

53 minutes ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

53 minutes ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

54 minutes ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

55 minutes ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

55 minutes ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

56 minutes ago