ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.
ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಮೊದಲ ಬಾರಿಗೆ ಐಸ್ ಕ್ರೀಮ್ ಅಂಗಡಿ ತೆರೆದ ಎನ್. ವಿಶಾಲಾಕ್ಷಿ ಅವರು ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಹ್ಯಾಂಗ್ಯೋ ಕಂಪನಿಯ ಸಹಾಯಹಸ್ತದಿಂದ ಕೊಟ್ಟೂರಿನ ಕಿಶನ್ ಎಂಟರ್ಪ್ರೈಸ್ ವಿತರಕರಿಂದ ಚಾಕೋಬಾರ್, ಐಸ್ ಕ್ಯಾಂಡಿ, ಕುಲ್ಫಿ ಐಸ್, ಕೋನ್ ಐಸ್, ಕಪ್ ಐಸ್ ಇನ್ನಿತರೆ ಎಲ್ಲಾ ತರಹದ ಐಸ್ ಕ್ರೀಮ್ ಉತ್ಪನ್ನಗಳನ್ನು ನೇರವಾಗಿ ಪಡೆದು, ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ಬಿಸಿಲಿನ ತಾಪಕ್ಕೆ ತತ್ತರಿಸಿದ ಜನರು, ಮಕ್ಕಳು ಹಾಗೂ ಯುವಕರು ಇದೀಗ ಮುಗಿಬಿದ್ದು, ತಂಪು ಪಾನೀಯಗಳು ಹಾಗೂ ಐಸ್ ಕ್ರೀಮ್ ಗಳ ಮೊರೆ ಹೋಗುತ್ತಿದ್ದಾರೆ.
ಇದುವರೆಗೂ ಬಿಡುಗಡೆಯಾದ ಕಂತುಗಳ ಹಣವನ್ನು ಬ್ಯಾಂಕ್ ಖಾತೆಯಲ್ಲೇ ಉಳಿಸಿ, ಅವರ ಪತಿ ಎನ್. ಬಸವರಾಜ ಅವರ ಸಹಕಾರದೊಂದಿಗೆ ಈ ಉದ್ಯಮವನ್ನು ಆರಂಭಿಸಿರುವುದಾಗಿ ಹೇಳಿಕೊಂಡಿದ್ದಾರೆ. ಉಚಿತ ಭಾಗ್ಯವು ನಮ್ಮ ಬದುಕಿಗೆ ವರದಾನವಾಗಿದೆ, ಅವರ ಹೊಟ್ಟೆ ನೂರಾರು ಕಾಲ ತಣ್ಣಗಿರಲಿ ಎಂದು ಸ್ಮರಿಸಿ, ಸಿಎಂ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಕರ್ನಾಟಕ ಸರ್ಕಾರದ ‘ಗೃಹಲಕ್ಷ್ಮಿ ಯೋಜನೆ’ ಕುಟುಂಬದ ಯಜಮಾನಿ ಮಹಿಳೆಗೆ ಆರ್ಥಿಕ ಸ್ವಾವಲಂಬನೆ ನೀಡಲು ಪ್ರತಿ ತಿಂಗಳು ನೇರವಾಗಿ ₹2,000 ಸಹಾಯಧನ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ.
ವರದಿ:- ಮಣಿಕಂಠ. ಬಿ
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…