Categories: LatestSpecial

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.
ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಮೊದಲ ಬಾರಿಗೆ ಐಸ್ ಕ್ರೀಮ್ ಅಂಗಡಿ ತೆರೆದ ಎನ್‌. ವಿಶಾಲಾಕ್ಷಿ ಅವರು ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹ್ಯಾಂಗ್ಯೋ‌ ಕಂಪನಿಯ ಸಹಾಯಹಸ್ತದಿಂದ ಕೊಟ್ಟೂರಿನ ಕಿಶನ್ ಎಂಟರ್ಪ್ರೈಸ್ ವಿತರಕರಿಂದ ಚಾಕೋಬಾರ್, ಐಸ್ ಕ್ಯಾಂಡಿ, ಕುಲ್ಫಿ ಐಸ್, ಕೋನ್ ಐಸ್, ಕಪ್ ಐಸ್ ಇನ್ನಿತರೆ ಎಲ್ಲಾ ತರಹದ ಐಸ್ ಕ್ರೀಮ್ ಉತ್ಪನ್ನಗಳನ್ನು ನೇರವಾಗಿ ಪಡೆದು, ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ಬಿಸಿಲಿನ ತಾಪಕ್ಕೆ ತತ್ತರಿಸಿದ ಜನರು, ಮಕ್ಕಳು ಹಾಗೂ ಯುವಕರು ಇದೀಗ ಮುಗಿಬಿದ್ದು, ತಂಪು ಪಾನೀಯಗಳು ಹಾಗೂ ಐಸ್ ಕ್ರೀಮ್ ಗಳ ಮೊರೆ ಹೋಗುತ್ತಿದ್ದಾರೆ.

ಇದುವರೆಗೂ ಬಿಡುಗಡೆಯಾದ ಕಂತುಗಳ ಹಣವನ್ನು ಬ್ಯಾಂಕ್ ಖಾತೆಯಲ್ಲೇ ಉಳಿಸಿ, ಅವರ ಪತಿ ಎನ್. ಬಸವರಾಜ ಅವರ ಸಹಕಾರದೊಂದಿಗೆ ಈ ಉದ್ಯಮವನ್ನು ಆರಂಭಿಸಿರುವುದಾಗಿ ಹೇಳಿಕೊಂಡಿದ್ದಾರೆ. ಉಚಿತ ಭಾಗ್ಯವು ನಮ್ಮ ಬದುಕಿಗೆ ವರದಾನವಾಗಿದೆ, ಅವರ ಹೊಟ್ಟೆ ನೂರಾರು ಕಾಲ ತಣ್ಣಗಿರಲಿ ಎಂದು ಸ್ಮರಿಸಿ, ಸಿಎಂ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಕರ್ನಾಟಕ ಸರ್ಕಾರದ ‘ಗೃಹಲಕ್ಷ್ಮಿ ಯೋಜನೆ’ ಕುಟುಂಬದ ಯಜಮಾನಿ ಮಹಿಳೆಗೆ ಆರ್ಥಿಕ ಸ್ವಾವಲಂಬನೆ ನೀಡಲು ಪ್ರತಿ ತಿಂಗಳು ನೇರವಾಗಿ ₹2,000 ಸಹಾಯಧನ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

14 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

14 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

14 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

14 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

14 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

14 hours ago