ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು, ಕೆಎಎಸ್ (ಕಿರಿಯ ಶ್ರೇಣಿ) ಅಧಿಕಾರಿ ಜೆ. ಮಹೇಶ್ ಅವರು ಶನಿವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕಳೆದ ವರ್ಷ ಭಟ್ಕಳ ಉಪ ವಿಭಾಗಾಧಿಕಾರಿಯಾಗಿದ್ದ ಡಾ. ನಯನ್ ಎನ್. ಅವರ ವರ್ಗಾವಣೆಯ ಬಳಿಕ ಈ ಹುದ್ದೆ ತೆರವಾಗಿತ್ತು. ಬಳಿಕ ಶಿರಸಿ ಉಪ ವಿಭಾಗಾಧಿಕಾರಿಯಾಗಿದ್ದ ಕುಮಾರಿ ಕಾವ್ಯರಾಣಿ ಅವರಿಗೆ ಭಟ್ಕಳದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು. ನಂತರ ಅವರೂ ವರ್ಗಾವಣೆಗೊಂಡ ಹಿನ್ನೆಲೆ, ಹುದ್ದೆ ಮತ್ತೆ ಖಾಲಿಯಾಗಿದ್ದು ಆಡಳಿತಾತ್ಮಕ ಕಾರ್ಯಗಳಲ್ಲಿ ಸಮಸ್ಯೆಗಳು ಎದುರಾಗುತ್ತಿದ್ದವು.
ಈ ಮಧ್ಯೆ ಹೊನ್ನಾವರ ತಹಶೀಲ್ದಾರ್ ಪ್ರವೀಣ್ ಕರಂಡೆ ಅವರು ಪ್ರಭಾರಿ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಕಾಯಂ ಎಸಿ ಇಲ್ಲದ ಕಾರಣ ಸಾರ್ವಜನಿಕರ ದಿನನಿತ್ಯದ ಆಡಳಿತಾತ್ಮಕ ಕೆಲಸಗಳು ವಿಳಂಬವಾಗುತ್ತಿದ್ದು, ಜನರು ತೊಂದರೆ ಅನುಭವಿಸುತ್ತಿದ್ದರು.
ಈ ಸಮಸ್ಯೆಯನ್ನು “ಭ್ರಷ್ಟರ ಬೇಟೆ” ಪತ್ರಿಕೆಯ ತಂಡ ಕಳೆದ ಆಗಸ್ಟ್ ತಿಂಗಳ ಸಂಚಿಕೆಯಲ್ಲಿ ಮುಖಪುಟ ಸುದ್ದಿಯಾಗಿ ಪ್ರಕಟಿಸಿ ಸಚಿವರು, ಜಿಲ್ಲಾಧಿಕಾರಿ ಹಾಗೂ ರಾಜ್ಯ ಸರ್ಕಾರದ ಗಮನ ಸೆಳೆದಿತ್ತು. ಇದೀಗ ಸರ್ಕಾರ ಭಟ್ಕಳಕ್ಕೆ ಕಾಯಂ ಉಪ ವಿಭಾಗಾಧಿಕಾರಿಯನ್ನು ನೇಮಕ ಮಾಡುವ ಮೂಲಕ ಸಾರ್ವಜನಿಕರ ಬಹುಕಾಲದ ಬೇಡಿಕೆಗೆ ಸ್ಪಂದಿಸಿದೆ.
ರಾಜ್ಯ ಸರ್ಕಾರದ ಇತ್ತೀಚಿನ ವರ್ಗಾವಣೆ ಆದೇಶದಂತೆ ಭಟ್ಕಳಕ್ಕೆ ಬಂದಿರುವ ಜೆ. ಮಹೇಶ್ ಅವರು ಕಚೇರಿಯಲ್ಲಿ ಕಡತಗಳಿಗೆ ಸಹಿ ಹಾಕುವ ಮೂಲಕ ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಸೇವೆ ಸಲ್ಲಿಸಿದ್ದು, ಆಡಳಿತಾತ್ಮಕ ಅನುಭವ ಹೊಂದಿದ ಅಧಿಕಾರಿಯಾಗಿದ್ದಾರೆ.
ಹೊಸ ಉಪ ವಿಭಾಗಾಧಿಕಾರಿಯ ನೇಮಕದಿಂದ ಭಟ್ಕಳ ಸೇರಿದಂತೆ ಸುತ್ತಮುತ್ತಲಿನ ತಾಲ್ಲೂಕುಗಳ ಆಡಳಿತಾತ್ಮಕ ಕಾರ್ಯಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…