Latest

ಹೆಂಡತಿಯ ಅನೈತಿಕ ಸಂಬಂಧ ಹಾಗೂ ಪೊಲೀಸರ ಕಿರುಕುಳ, ಬೇಸತ್ತು ಆತ್ಮಹತ್ಯೆಗೆ ಶರಣಾದ ಯುವಕ.

ಇತ್ತೀಚೆಷ್ಟೇ ಮದುವೆಯಾಗಿದ್ದ ಯುವ ಜೋಡಿ ಸುಖವಾಗಿ ಸಂಸಾರ ಮಾಡಬೇಕಿದ್ದ ಯುವಕ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಮೂಲದ(ಕೋಟಿಲಿಂಗೇಶ್ವರ ನಗರ ನಿವಾಸಿ) ನಿಖಿಲ್ ಕುಂದಗೋಳ ಮತ್ತು (ಕೇಶ್ವಪೂರದ ನಿವಾಸಿ) ಪ್ರೀತಿ ಪೋಗಳಾಪೂರ್ ಎಂಬ ಯುವತಿ ಇತ್ತೀಚೆಷ್ಟೇ ವಿವಾಹವಾಗಿದ್ದರು ಮೊದಲಿಗೆ ನಿಖಿಲ್ ಹಾಗೂ ಪ್ರೀತಿ ಇಬ್ಬರು ತಕ್ಕ ಮಟ್ಟಿಗೆ ಸಂಸಾರ ಮಾಡುತ್ತಿದ್ದರು ದಿನ ಕಳೆದಂತೆ ನಿಖಿಲ್ ಕುಟುಂಬದಲ್ಲಿ ಪ್ರೀತಿ ಬೇರೆ ಯುವಕನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿರುವ ವಿಚಾರ ಗೊತ್ತಾಗಿ ನಿಖಿಲ್ ಹಲವಾರು ಬಾರಿ ಹೆಂಡತಿ ಪ್ರೀತಿಗೆ ಬುದ್ಧಿವಾದ ಹೇಳಿದರೂ ಪ್ರೀತಿ ಯಾರ ಮಾತಿಗೂ ತಲೆ ಕೆಡಿಸಿಕೊಳ್ಳದೆ ಹಾಗೆಯೇ ತನ್ನ ಚಾಳಿಯನ್ನು ಮುಂದುವರೆಸಿದ್ದಳು ಇದನ್ನೇ ಬಂಡವಾಳವಾಗಿಸಿಕೊಂಡ ಪ್ರೀತಿ ನಿಖಿಲ್ ನ ಮಾತಿಗೆ ಕೆಂಡಾಮಂಡಲ ಆಗಿ ತನ್ನ ತವರು ಮನೆಗೆ ಹೋಗಿದ್ದಳು ಹಾಗೂ ಪ್ರೀತಿ ಕೇಶ್ವಪೂರ್ ಪೊಲೀಸ್ ಠಾಣೆಗೆ ಹೋಗಿ ನನ್ನ ಗಂಡ ನಿಖಿಲ್ ಕುಂದಗೋಳ ನನಗೆ ಕಿರುಕುಳ ಕೊಡುತ್ತಿದ್ದಾನೆ ಎಂದು ಪಿರ್ಯಾದಿ ನೀಡಿದ್ದಾಳೆ ನಂತರ ಕೇಶ್ವಪೂರ್ ಪೊಲೀಸ್ ಠಾಣೆಯ ಪೊಲೀಸರು ನಿಖಿಲ್ ನನ್ನು ವಿಚಾರಣೆಗೆ ಕೆಶ್ವಾಪೂರ್ ಪೊಲೀಸ್ ಠಾಣೆಗೆ ಕರೆಯಿಸಿ ನೀನು ಪ್ರೀತಿಗೆ ಏನೂ ಕಿರುಕುಳ ಕೊಡಬೇಡ ಕೊಟ್ಟರೆ ನಿನ್ನ ಮೇಲೆ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕಾಗಿತ್ತದೆ ಎಂದು ಆವಾಜ್ ಹಾಕಿದ್ದಾರೆ ಇದರಿಂದ ಮನನೊಂದ ನಿಖಿಲ್ ಮನೆಗೇ ಬಂದು ರಾತ್ರಿ ಮಲಗಿದ್ದ ಮುಂದೆ ಬೆಳಿಗ್ಗೆ ಆಗುವಷ್ಟರಲ್ಲಿ ಬೇಡರೂಮ್ ನ ಫ್ಯಾನ್ ಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ
ನಮ್ಮ ಮಗ (ನಿಖಿಲ್ ಕುಂದಗೋಳ) ಪ್ರೀತಿ ಕುಟುಂಬಸ್ಥರು ಹಾಗೂ ಕೇಶ್ವಾಪೂರ್ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸಾತೆನಹಳ್ಳಿ ಹಾಗೂ ಎಎಸ್ಐ ಜಯಶ್ರೀ ಛಲವಾದಿ ರವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಿಖಿಲನ ಕುಟುಂಬಸ್ಥರು ಗಂಭೀರವಾಗಿ ಆರೋಪಿಸುತ್ತಿದ್ದಾರೆ ಕುಟುಂಬದ ಕಲಹದ ಹಿನ್ನೆಲೆಯಲ್ಲಿ ನಿಖಿಲ್ ಆತ್ಮಹತ್ಯೆಗೆ ಶರಣಾಗಿದ್ದು ಈ ಪ್ರಕರಣ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆಯಾಗಿ ನಿಖಿಲ್ ನ ಆತ್ಮಹತ್ಯೆಗೆ ಕಾರಣವಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ನಿಖಿಲ್ ಕುಟುಂಬಸ್ಥರು ಹೇಳುತ್ತಿದ್ದಾರೆ.
ವರದಿ: ಶಿವು ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago