ಯಲ್ಲಾಪುರದಲ್ಲಿ ನಡೆದ ಘಟನೆ ಇದಾಗಿದ್ದು ಯಲ್ಲಾಪುರದಿಂದ ಹುನಷೆಟ್ಟಿ ಕೊಪ್ಪದ ಜಾತ್ರೆಗೆ ತೆರಳುವ ಸಂದರ್ಭದಲ್ಲಿ ಉಜ್ವಲ ಪ್ರಕಾಶ್ ಕಕ್ಕೇರಿಕರ್ ಇವರು ತನ್ನ ಅಣ್ಣ ಪ್ರಜ್ವಲ್ ಮತ್ತು ತಂದೆ ಹಾಗೂ ತನ್ನ ಗೆಳೆಯ ವೆಲೆಸ್ಟಿನ್ ಇವರೊಂದಿಗೆ ದಿನಾಂಕ ೨೪ ೨ ೨೦೩೪ ರಂದು ತನ್ನ ಮೋಟಾರ್ ಸೈಕಲ್ ನಲ್ಲಿ ಯಲ್ಲಾಪುರದಿಂದ ಹುಣಶೆಟ್ಟಿಕೊಪ್ಪ ಜಾತ್ರೆಗೆ ಹೋಗುತ್ತಾ ಕುಚಗಾಂವ್ ದಾಟಿ ಸ್ವಲ್ಪ ಮುಂದೆ ಹೋರಟಾಗ ಆರೋಪಿಯು ಮೋಟಾರ್ ಸೈಕಲ್ ನ್ನು ಹಿಂದಿಕ್ಕಿ ಮುಂದೆ ಹೊರಟಾಗ ಉಜ್ವಲನ ಬೈಕ್ ನ್ನು ಹಿಂದೆ ಹಾಕಿ ಕೂಗುತ್ತಾ ಮುಂದೆ ಹೋಗಿದ್ದು ನಂತರ ಉಜ್ವಲ ನು ಅವರನ್ನು ಹಿಂದಿಕ್ಕಿ ಮುಂದಕ್ಕೆ ಹೋಗಿ ಹುಣಶೆಟ್ಟಿಕೊಪ್ಪದ ಚರ್ಚ ಹತ್ತಿರ ತಲುಪಿ ಮೋಟಾರ್ ಸೈಕಲ್ ನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದಾಗ ಇಬ್ಬರು ಆರೋಪಿತರು ಕಾರ್ ನಲ್ಲಿ ಮತ್ತೆ ಇಬ್ಬರು ಮೋಟಾರ್ ಬೈಕ್ ನಲ್ಲಿ ಬಂದು ಉಜ್ವಲ್, ಪ್ರಜ್ವಲ್ , ಪ್ರಕಾಶ್ ಹಾಗೂ ವೆಲೆಸ್ಟಿನ್ ಅವರಿಗೆ ರಾತ್ರೆ ೯ ಗಂಟೆಗೆ ಅಡ್ಡಗಟ್ಟಿ ತಡೆದು ಉಜ್ವಲನ ಅಣ್ಣನಿಗೆ ಹತ್ತಿರದ ಶಾಲೆಯ ಹತ್ತಿರ ಕರೆದುಕೊಂಡು ಹೋಗಿ ಅವಾಚ್ಯವಾಗಿ ಬೈದು ಎಲ್ಲರೂ ಸೇರಿ ಕೈಯಿಂದ ಮೈಮೇಲೆ ಹೊಡೆದರು . ಅವರ ಪೈಕಿ ಸಾಣಾ ಮರಾಠಿ ಎಂಬುವವನು ಪ್ರಜ್ವಲನಿಗೆ ಬಲವಾಗಿ ಕೆನ್ನೆ ಮೇಲೆ ಹೊಡೆದು ಎಳೆದಾಡುತ್ತಿರುವುದನ್ನು ಉಜ್ವಲನು ನೋಡಿ ಅವನು ಮತ್ತು ಅವನ ಗೆಳೆಯ ಬಿಡಿಸಲು ಮುಂದಾದಾಗ ಇವರಿಗೂ ಇದೆ ಗತಿ ಕಾಣಿಸುತ್ತೇನೆ ಎಂದು ಬೆದರಿಕೆ ಹಾಕಿ ಹೋಗಿದ್ದಾರೆ . ನಂತರ ಪ್ರಜ್ವಲನನ್ನು ಆಂಬುಲೆನ್ಸ ಲ್ಲಿ ಯಲ್ಲಾಪುರ ಸರ್ಕಾರಿ ಆಸ್ಪತ್ತ್ರೆಗೆ ಕರೆದುಕೊಂಡು ಬಂದಾಗ ಅವನನ್ನು ಪರೀಕ್ಷಿಸಿದ. ವೈದ್ಯರು ಪ್ರಜ್ವಲನು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ .ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ವರದಿ :ಶ್ರೀಪಾದ್ ಎಸ್ ಏಚ್
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…