Latest

ಓವರ್ ಟೇಕ್ ಮಾಡಿದ್ದಕ್ಕೆ ಕೊಲೆಯಾದ ಯುವಕ

ಯಲ್ಲಾಪುರದಲ್ಲಿ ನಡೆದ ಘಟನೆ ಇದಾಗಿದ್ದು ಯಲ್ಲಾಪುರದಿಂದ ಹುನಷೆಟ್ಟಿ ಕೊಪ್ಪದ ಜಾತ್ರೆಗೆ ತೆರಳುವ ಸಂದರ್ಭದಲ್ಲಿ ಉಜ್ವಲ ಪ್ರಕಾಶ್ ಕಕ್ಕೇರಿಕರ್ ಇವರು ತನ್ನ ಅಣ್ಣ ಪ್ರಜ್ವಲ್ ಮತ್ತು ತಂದೆ ಹಾಗೂ ತನ್ನ ಗೆಳೆಯ ವೆಲೆಸ್ಟಿನ್ ಇವರೊಂದಿಗೆ ದಿನಾಂಕ ೨೪ ೨ ೨೦೩೪ ರಂದು ತನ್ನ ಮೋಟಾರ್ ಸೈಕಲ್ ನಲ್ಲಿ ಯಲ್ಲಾಪುರದಿಂದ ಹುಣಶೆಟ್ಟಿಕೊಪ್ಪ ಜಾತ್ರೆಗೆ ಹೋಗುತ್ತಾ ಕುಚಗಾಂವ್ ದಾಟಿ ಸ್ವಲ್ಪ ಮುಂದೆ ಹೋರಟಾಗ ಆರೋಪಿಯು ಮೋಟಾರ್ ಸೈಕಲ್ ನ್ನು ಹಿಂದಿಕ್ಕಿ ಮುಂದೆ ಹೊರಟಾಗ ಉಜ್ವಲನ ಬೈಕ್ ನ್ನು ಹಿಂದೆ ಹಾಕಿ ಕೂಗುತ್ತಾ ಮುಂದೆ ಹೋಗಿದ್ದು ನಂತರ ಉಜ್ವಲ ನು ಅವರನ್ನು ಹಿಂದಿಕ್ಕಿ ಮುಂದಕ್ಕೆ ಹೋಗಿ ಹುಣಶೆಟ್ಟಿಕೊಪ್ಪದ ಚರ್ಚ ಹತ್ತಿರ ತಲುಪಿ ಮೋಟಾರ್ ಸೈಕಲ್ ನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದಾಗ ಇಬ್ಬರು ಆರೋಪಿತರು ಕಾರ್ ನಲ್ಲಿ ಮತ್ತೆ ಇಬ್ಬರು ಮೋಟಾರ್ ಬೈಕ್ ನಲ್ಲಿ ಬಂದು ಉಜ್ವಲ್, ಪ್ರಜ್ವಲ್ , ಪ್ರಕಾಶ್ ಹಾಗೂ ವೆಲೆಸ್ಟಿನ್ ಅವರಿಗೆ ರಾತ್ರೆ ೯ ಗಂಟೆಗೆ ಅಡ್ಡಗಟ್ಟಿ ತಡೆದು ಉಜ್ವಲನ ಅಣ್ಣನಿಗೆ ಹತ್ತಿರದ ಶಾಲೆಯ ಹತ್ತಿರ ಕರೆದುಕೊಂಡು ಹೋಗಿ ಅವಾಚ್ಯವಾಗಿ ಬೈದು ಎಲ್ಲರೂ ಸೇರಿ ಕೈಯಿಂದ ಮೈಮೇಲೆ ಹೊಡೆದರು . ಅವರ ಪೈಕಿ ಸಾಣಾ ಮರಾಠಿ ಎಂಬುವವನು ಪ್ರಜ್ವಲನಿಗೆ ಬಲವಾಗಿ ಕೆನ್ನೆ ಮೇಲೆ ಹೊಡೆದು ಎಳೆದಾಡುತ್ತಿರುವುದನ್ನು ಉಜ್ವಲನು ನೋಡಿ ಅವನು ಮತ್ತು ಅವನ ಗೆಳೆಯ ಬಿಡಿಸಲು ಮುಂದಾದಾಗ ಇವರಿಗೂ ಇದೆ ಗತಿ ಕಾಣಿಸುತ್ತೇನೆ ಎಂದು ಬೆದರಿಕೆ ಹಾಕಿ ಹೋಗಿದ್ದಾರೆ . ನಂತರ ಪ್ರಜ್ವಲನನ್ನು ಆಂಬುಲೆನ್ಸ ಲ್ಲಿ ಯಲ್ಲಾಪುರ ಸರ್ಕಾರಿ ಆಸ್ಪತ್ತ್ರೆಗೆ ಕರೆದುಕೊಂಡು ಬಂದಾಗ ಅವನನ್ನು ಪರೀಕ್ಷಿಸಿದ. ವೈದ್ಯರು ಪ್ರಜ್ವಲನು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ .ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ವರದಿ :ಶ್ರೀಪಾದ್ ಎಸ್ ಏಚ್

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

18 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

18 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

18 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

18 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

18 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

23 hours ago