ಧಾರವಾಡ: ಧಾರವಾಡದ ಕಂಠಿಗಲ್ಲಿಯಲ್ಲಿ ಮಧ್ಯಾಹ್ನದ ಹೊತ್ತಿನಲ್ಲಿ ಉದ್ಘಟನೆಗೆ ಕಾರಣವಾದ ಹಿಂಸಾತ್ಮಕ ಘಟನೆ ನಡೆದಿದೆ. ರಕ್ತಪರೀಕ್ಷಾ ತಜ್ಞನಾಗಿರುವ ರಾಘವೇಂದ್ರ ಗಾಯಕವಾಡ್ ಎಂಬ ಯುವಕನಿಗೆ ಮಲ್ಲಿಕ್ ಎಂಬ ವ್ಯಕ್ತಿ ಚಾಕುವಿನಿಂದ ಇರಿದ ಘಟನೆ ಆತಂಕ ಸೃಷ್ಟಿಸಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ದುಷ್ಕರ್ಮಿ ಮಲ್ಲಿಕ್ ಚಾಕುವಿನಿಂದ ತೀವ್ರವಾಗಿ ಇರಿದು ಬಿಸಾಕಿ ಸ್ಥಳದಿಂದ ಪರಾರಿಯಾಗಿದ್ದಾನೆ. ರಾಘವೇಂದ್ರನ ಬೆನ್ನಿನ ಭಾಗದಲ್ಲಿ ಚಾಕುವಿನ ಅರ್ಧ ಭಾಗ ಇನ್ನೂ ಅಂಟಿಕೊಂಡಿರುವ ಸ್ಥಿತಿಯಲ್ಲಿದ್ದು, ಗಂಭೀರ ಗಾಯಗೊಂಡ ಅವರನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಣಕಾಸು ಸಂಬಂಧಿತ ವಿಚಾರವೇ ಈ ದಾಳಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿರುವಂತೆಯೇ, ಈ ಸಂಬಂಧ ಇನ್ನೂ ದೃಢವಾದ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಕೈಗೆತ್ತಿಕೊಂಡಿದ್ದು, ಆರೋಪಿ ಮಲ್ಲಿಕ್ ಗಿಂಗಾಣಿ ತಲುಪಲು ತನಿಖೆ ಆರಂಭಿಸಿದ್ದಾರೆ.
ಘಟನೆ ಸಂಬಂಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ. ವರದಿ: ಮಹೇಶ್ ನಿಕ್ಕಮ್ಮನವರ್.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…