Latest

ಕಳ್ಳತನದ ಆರೋಪಕ್ಕೆ ಯುವಕನನ್ನು ಮರಕ್ಕೆ ಕಟ್ಟಿ ಕೆಂಪು ಇರುವೆಯ ಹಿಂಸೆ..!

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಅಸ್ತಾಪನಹಳ್ಳಿ ಗ್ರಾಮದಲ್ಲಿ ನಡೆದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಏಪ್ರಿಲ್ 4 ರಂದು ಗ್ರಾಮದಲ್ಲಿ ಇಬ್ಬರು ಬಾಲಕರನ್ನು ಕಳ್ಳತನ ಆರೋಪಿಸಿ ಹಲ್ಲೆಗೊಳಿಸಿದ ಘಟನೆ, ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ಮೂಲಕ ಪ್ರಚಂಡ ಗಮನಸೆಳೆಯುತ್ತಿದೆ.

ಹಕ್ಕಿ-ಪಿಕ್ಕಿ ಜನಾಂಗದ ಇಬ್ಬರು ಬಾಲಕರನ್ನು, ಅದೇ ಸಮುದಾಯದ ಹತ್ತು ಮಂದಿ ಯುವಕರು ಹಿಡಿದು ಅಡಿಕೆ ತೋಟಕ್ಕೆ ಕರೆದೊಯ್ದು, ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದು, ಅಷ್ಟರಲ್ಲಿ ಬಾಲಕರ ಗುಪ್ತಾಂಗಗಳಿಗೆ ಕೆಂಪು ಇರುವೆಗಳನ್ನು ಬಿಟ್ಟುಕೊಡುವ ಕ್ರೂರವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಇದೊಂದು ಮಾನವೀಯ ಮೌಲ್ಯವಿಲ್ಲದ, ಹೃದಯ ವಿದ್ರಾವಕ ಕೃತ್ಯವೆಂದು ಸಾರ್ವಜನಿಕರು ಖಂಡಿಸಿದ್ದಾರೆ.

ಘಟನೆಯ ತಕ್ಷಣದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದು, ಮೊದಲು ಸುಭಾಷ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಎಂಟು ಮಂದಿ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ದರ್ಶನ್, ಲಕ್ಕಿ, ಪರಶು, ಶಿವದರ್ಶನ್, ಹರೀಶ್, ಪಟ್ಟಿ ರಾಜು, ಭೂಣಿ ಹಾಗೂ ಸುಧನ್ ಅಲಿಯಾಸ್ ಮಧುಸೂಧನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಹತ್ತು ಮಂದಿಯಲ್ಲಿ ನಾಲ್ವರು ಅಪ್ರಾಪ್ತರಾಗಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಮೂಲಗಳ ಪ್ರಕಾರ, ಕೆಲವು ತಿಂಗಳ ಹಿಂದೆಯೇ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಆದರೆ ಈಗಲೇ ಈ ಕುರಿತಾದ ವಿಡಿಯೋ ವೈರಲ್ ಆಗಿರುವುದರಿಂದ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಅಸ್ತಾಪನಹಳ್ಳಿ ಗ್ರಾಮದ ದರ್ಶನ್ ಎಂಬುವರ ಮನೆಗೆ ಕಳ್ಳತನಕ್ಕೆ ಯತ್ನಿಸಿ ಪರಾರಿಯಾಗಿದ್ದ ಇಬ್ಬರು ಬಾಲಕರಲ್ಲಿ ಒಬ್ಬನನ್ನು ಪತ್ತೆಹಚ್ಚಿ, ತೋಟಕ್ಕೆ ಕರೆದೊಯ್ದು ಥಳಿಸಲಾಗಿದೆ. ಇಬ್ಬರಿಗೂ ಉಗ್ರವಾಗಿ ಶಾರೀರಿಕ ಮತ್ತು ಮಾನಸಿಕ ಹಿಂಸೆ ನೀಡಲಾಗಿದೆ. ಹಲ್ಲೆಗೊಳಗಾದ ಬಾಲಕರ ಪೋಷಕರು ಪ್ರಕರಣ ದಾಖಲಿಸಿದ್ದು, ಈ ಹಿಂದೆ ಮಾಲಿನ್ಯದಿಂದ ಕೂಡಿದ ವಲಸೆ ಜನಾಂಗದ ಹಕ್ಕಿ-ಪಿಕ್ಕಿ ಸಮುದಾಯದ ಬದುಕಿಗೆ ಇದೊಂದು ಅಂಧಕಾರದ ದುರ್ಘಟನೆ ಎನಿಸಿದೆ.

ಚನ್ನಗಿರಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಹರಸಾಹಸ ಪಡುತ್ತಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago